ತುಮಕೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಶುಕ್ರವಾರ ರಾತ್ರಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ದಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದರು.
ಮಠದಲ್ಲಿ ಶಿವಕುಮಾರ ಸ್ವಾಮೀಜಿಯಗದ್ದುಗೆ ದರ್ಶನ ಪಡೆದರು. ಸ್ವಾಮೀಜಿ ಪುತ್ಥಳಿಗೆ ನಮಿಸಿ ಆಶೀರ್ವಾದ ಬೇಡಿದರು. ನಂತರ ಸಿದ್ದಲಿಂಗ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಶಿವಕುಮಾರ ಸ್ವಾಮೀಜಿಯ ಬೆಳ್ಳಿ ಮೂರ್ತಿ ನೀಡಿ, ಅಕ್ಷತೆ ಹಾಕಿ ಆಶೀರ್ವದಿಸಿದರು. ಕೆಲ ಸಮಯ ಸ್ವಾಮೀಜಿ ಜತೆಗೆ ಚರ್ಚಿಸಿದರು.
ಸಚಿವರಾದ ಜೆ.ಸಿ. ಮಾಧುಸ್ವಾಮಿ, ಬಿ.ಸಿ. ನಾಗೇಶ್, ವಿ. ಸೋಮಣ್ಣ, ಮುರುಗೇಶ್ ನಿರಾಣಿ, ಸಂಸದ ಜಿ.ಎಸ್. ಬಸವರಾಜು, ಶಾಸಕರಾದ ಜಿ.ಬಿ. ಜ್ಯೋತಿ ಗಣೇಶ್, ಡಾ.ಸಿ.ಎಂ. ರಾಜೇಶ್ ಗೌಡ, ಎಂ.ಪಿ. ರೇಣುಕಾಚಾರ್ಯ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಇದ್ದರು.