ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅರೇನಹಳ್ಳಿ ಗೇಟ್ ಬಳಿ ಕೆ ಎಸ್ ಆರ್ ಟಿ ಸಿ ಬಸ್ ಸೇತುವೆಗೆ ಡಿಕ್ಕಿ ಹೊಡೆದು ನಿಂತಿದ್ದು, ಬೆಂಗಳೂರಿನಿಂದ ಕಡೂರಿಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.
ರಸ್ತೆ ಕಾಮಗಾರಿ ಅಪೂರ್ಣಗೊಂಡಿದ್ದರಿಂದ ರಸ್ತೆಯಲ್ಲಿನ ಹೊಂಡ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ನಲ್ಲಿ 17 ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ. ಗುಬ್ಬಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.