ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ರಾಮಘಟ್ಟ ಗ್ರಾಮದಲ್ಲಿ ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ 200 ಕೋಳಿ, 50 ಕುರಿ, 6 ಹಸುಗಳು ಸಜೀವದಹನವಾದ ಘಟನೆ ಸೋಮವಾರ ರಾತ್ರಿ ನಡೆದಿದೆ.
ರೈತ ಚೇತನ್ ಕುಮಾರ್ ಎಂಬುವರಿಗೆ ಸೇರಿದ ಹಸು, ಕುರಿ, ಕೋಳಿಗಳು ಮೃತಪಟ್ಟಿವೆ. ಆದರೆ ಈವರೆಗೆ ತಹಶೀಲ್ದಾರ್, ಪಿಡಿಒ, ಪಶು ಇಲಾಖೆಯ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಭೇಟಿ ನೀಡಿಲ್ಲ.
ಹಸು, ಕುರಿ, ಕೋಳಿ ಕಳೆದುಕೊಂಡ ರೈತ ಚೇತನ್ ಕುಟುಂಬ ಕಂಗಾಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರು ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತಪಟ್ಟಿದ್ದವು.