ತುಮಕೂರು: ತಾಲೂಕಿನ ಕಾರನಹಳ್ಳಿ ಗ್ರಾಮದಲ್ಲಿ ಬೆಂಕಿ ಬಿದ್ದ ಪರಿಣಾಮ ಕೊಟ್ಟಿಗೆಯಲ್ಲಿದ್ದ 9 ಹಸುಗಳು ಮತ್ತು 20 ಮೇಕೆಗಳು ಮೃತಪಟ್ಟಿರುವ ಘಟನೆ ಸಂಭವಿಸಿದೆ.
ಈ ಘಟನೆ ಕಾರನಹಳ್ಳಿ ನಿವಾಸಿ ಚಿಕ್ಕಣ್ಣಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಸಂಭವಿಸಿದೆ. ಬೆಂಕಿಗೆ ಒಂದು ಟ್ರ್ಯಾಕ್ಟರ್, ಅಡಕೆ, ಕೃಷಿ ಉಪಕರಣಗಳು ಕೂಡ ಬೆಂಕಿಗಾಹುತಿಯಾಗಿವೆ. ನಾಲ್ಕೈದು ಜಾನುವಾರುಗಳ ರಕ್ಷಣೆ ಮಾಡಲಾಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.