ತುಮಕೂರು: ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕೂಮಾರ್ ಅವರು ಜಿಲ್ಲೆಯ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಮತ್ತು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಎರಡೂ ಮಠಗಳ ಶ್ರೀಗಳ ಆಶೀರ್ವಾದ ಪಡೆದರು.
ಶಿವಕುಮಾರ್ ಅವರು ಸಂಕಷ್ಟದ ಸಂದರ್ಭದಲ್ಲಿ ಮತ್ತು ಶುಭ ಕಾರ್ಯ ನೆರವೇರಿಸುವ ಸಂದರ್ಭಗಳಲ್ಲಿ ಕಾಡುಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಅಜ್ಜಯ್ಯನ ಆಶೀರ್ವಾದ ಪಡೆಯುತ್ತಾರೆ.
ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವಕ್ಕೆ ಬಹುಮತ ತಂದಿರುವ ಹಿನ್ನಲೆಯಲ್ಲಿ ಈ ಭೇಟಿ ನೀಡಿದ್ದರು.
ತದ ನಂತರ ಸಿದ್ದಗಂಗಾ ಮಠಕ್ಕೆ ಮಧ್ಯಾಹ್ನ ಭೇಟಿ ನೀಡಿ ಸ್ವಾಮಿಜಿಗಳ ಆಶೀರ್ವಾದ ಪಡೆದರು. ಮೊದಲಿಗೆ ಹಿರಿಯ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ, ಧ್ಯಾನ ಮಂದಿರದಲ್ಲಿ ಕೆಲ ಕಾಲ ರುದ್ರಾಕ್ಷಿಯೊಂದಿಗೆ ಧ್ಯಾನ ಮಾಡಿದ ಡಿ.ಕೆ.ಶಿವಕುಮಾರ್,ನಂತರ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀಸಿದ್ದಲಿಂಗಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ಕೆಲ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.
ಈ ವೇಳೆ ಪಕ್ಷದ ತುಮಕೂರು ನಗರ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಾಯಸಂದ್ರ ರವಿಕುಮಾರ್, ಮುಖಂಡರಾದ ರೇವಣ್ಣಸಿದ್ದಯ್ಯ, ಮರಿಚನ್ನಮ್ಮ, ಸಿಮೆಂಟ್ ಮಂಜಣ್ಣ, ಪ್ರಚಾರ ಸಮಿತಿ ವಕ್ತಾರ ಕುಚ್ಚಂಗಿ ರಮೇಶ್ ಮತ್ತಿತರರು ಜೊತೆಗಿದ್ದರು.
ಅಮೇಥಿ ಹಾಗು ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಹೊರಬೀಳಲು ಕ್ಷಣಗಣನೆ ಶುರುವಾಗಿದ್ದು, ನಿರ್ಧಾರ ತೆಗೆದುಕೊಳ್ಳುವ ಸಂಪೂರ್ಣ ಅಧಿಕಾರವನ್ನು ಕಾಂಗ್ರೆಸ್…
ವಿಕೃತಕಾಮಿ ಉಮೇಶ್ ರೆಡ್ಡಿಗಿಂತ ಹತ್ತು ಪಟ್ಟು ಹೆಚ್ಚು ವಿಕೃತಕಾಮಿ ಸಂಸದ ಪ್ರಜ್ವಲ್ ರೇವಣ್ಣ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯ…
'ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಸರ್ಕಾರದ ಅನುದಾನದಿಂದ ವರ್ಷಕ್ಕೆ ಆರು ಸಿಲಿಂಡರ್ ಉಚಿತವಾಗಿ ಕೊಡಿಸುವೆ' ಎಂದು ಪಕ್ಷೇತರ ಅಭ್ಯರ್ಥಿ ರಾಮವಿಲಾಸ ರಾಮುಲಾಲಜಿ…
ಇಬ್ಬರು ಯುವಕರಾದ ಆಕಾಶ ಹಡಗಲಿ, ಅಭಿಷೇಕ ಸಜ್ಜನ, ಓರ್ವ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಇದನ್ನು ಮೊಬೈಲ್ನಲ್ಲಿ ಚಿತ್ರೀಕರಿಸಿಕೊಂಡು…
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರ…
ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಯುವಕರು ನೀರುಪಾಲಾಗಿರೋ ಘಟನೆ ಲಿಂಗಸುಗೂರು ತಾಲೂಕಿನ ಬಸವಸಾಗರ ಜಲಾಶಯದ ಕಾಲುವೆಯಲ್ಲಿ ನಡೆದಿದೆ. ಲಕ್ಕಣ್ಣ (22)…