ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ನಡೇಮಾವಿನಪುರದಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನಿಗೆ ಚಾಕು ಇರಿದ ಘಟನೆ ನಡೆದಿದೆ.
ವೆಂಕಟಗೌಡನಪಾಳ್ಯದ ಕೀರ್ತಿ ಹಲ್ಲೆಗೊಳಗಾದ ಯುವಕ. ಬಿಜೆಪಿಯ ಮೂವರಿಂದ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದೆ.
ಡಿಕೆ ಸುರೇಶ್ ನಾಮಿನೇಷನ್ಗೆ ಯಾಕೆ ಹೋಗಿದ್ದೆ ಎಂದು ಗಲಾಟೆ ತೆಗೆದು, ಚಂದ್ರ, ಜಗದೀಶ, ಸುನೀಲ್ ಎಂಬ ಮೂವರು ದೊಣ್ಣೆಯಿಂದ ಹಲ್ಲೆ ನಡೆಸಿ, ಚಾಕು ಇರಿದಿದ್ದಾರೆ.
ರಾಜಕೀಯ ವೈಷಮ್ಯ ಹಿನ್ನೆಲೆ ಹಲ್ಲೆ ಮಾಡಿದ್ದಾರೆಂದು ಯೂತ್ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿಯಾಗಿರುವ ಕೀರ್ತಿ ಎಂಬುವವರು ದೂರು ನೀಡಿದ್ದಾರೆ.
ಇನ್ನು ಆರೋಪಿಗಳು ಬಿಜೆಪಿ ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಇತ್ತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳು ಕೀರ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.