ತುಮಕೂರು: ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ನನ್ನ ಶಾಸಕತ್ವವನ್ನು ಅಸಿಂಧುಗೊಳಿಸಿದೆಯೇ ಹೊರತು ಅನರ್ಹಗೊಳಿಸಿಲ್ಲ ಎಂದು ಜೆಡಿಎಸ್ ಮುಖಂಡ ಡಿ.ಸಿ ಗೌರಿಶಂಕರ್ ಸ್ಪಷ್ಟಪಡಿಸಿದ್ದಾರೆ.
ತುಮಕೂರು ಸಮೀಪದ ಬಳ್ಳಗೆರೆಯ ನಿವಾಸದಲ್ಲಿ ಏರ್ಪಡಿಸಿದ್ದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಸಕತ್ವ ಅಸಿಂಧುಗೊಳಿಸಿರುವುದರಿಂದ 6 ವರ್ಷಗಳವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ನನ್ನ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ನಾನು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಹೇಳಿದರು.
ಮಾಜಿ ಶಾಸಕರು ನನ್ನ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆ. ಹೀಗಾಗಿ ನಾನು ಅಸಿಂಧುಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ನುಡಿದರು.
ನಾನು ಯಾರಿಗೂ ಯಾವುದೇ ಬಾಂಡ್ ಗಳನ್ನು ಹಂಚಿಕೆ ಮಾಡಿಲ್ಲ. ಅವರು ಯಾರೂ ಅಂತಲೂ ಗೊತ್ತಿಲ್ಲ. ಮಾಜಿ ಶಾಸಕರೇ ಬಾಂಡ್ ಗಳನ್ನು ಹಂಚಿ ನನ್ನ ಮೇಲೆ ಆರೋಪ ಮಾಡಿ ದ್ವೇಷ ತೀರಿಸಿಕೊಳ್ಳುತ್ತಿದ್ದಾರೆ ಎಂದರು.
ಮುಂದಿನ ಚುನಾವಣೆಗೆ ನಾನೇ ಅಭ್ಯರ್ಥಿ, ಚುನಾವಣೆಗೆ ನಿಲ್ಲುತ್ತೇನೆ. ಕಾರ್ಯಕರ್ತರು ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.
ಸುದ್ಧಿಗೋಷ್ಠಿಯಲ್ಲಿ ಮುಖಂಡ ಬೆಳಗುಂಬ ವೆಂಕಟೇಶ್,ಹಾಲನೂರು ಅನಂತ್ ಕುಮಾರ್,ಹಾಲನೂರು ಲೇಪಾಕ್ಷಿ ಇತರರು ಇದ್ದರು.