ತುಮಕೂರು: ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ, ಹಾಗಾಗಿ ಕನ್ಯಾಭಾಗ್ಯ ಯೋಜನೆ ಜಾರಿಗೆ ತಂದು ಮದುವೆ ಮಾಡಿಸಿ ಎಂದು ಶಿರಾ ತಾಲೂಕಿನ ಚಿಕ್ಕನಕೋಟೆ ಗ್ರಾಮದ ರೈತ ರಾಮಣ್ಣ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿದ್ದಾರೆ.
ರೈತರು ದೇಶದ ಬೆನ್ನೆಲುಬು, ಅನ್ನ ಹಾಕುವ ದೇವರು ಎಂಬೆಲ್ಲ ಹೊಗಳಿಕೆ ನಮಗೆ ಬೇಡ, ಕನ್ಯಾಭಾಗ್ಯ ಯೋಜನೆ ಜಾರಿಗೊಳಿಸಿ ರೈತ ಮಕ್ಕಳನ್ನ ಮದುವೆ ಮಾಡಿಸಿ ಎಂದು ಮನವಿ ಸಲ್ಲಿಸಿದ್ದಾರೆ
ತುಮಕೂರು ಜಿಲ್ಲೆಯ ಶಿರಾ ನಗರದ ಮಿನಿ ವಿಧಾನಸೌಧ ಆವರಣದಲ್ಲಿ ಜನತಾ ದರ್ಶನ ನಡೆಯುತ್ತಿದ್ದು, ನೂತನ ಜಿಲ್ಲಾಧಿಕಾರಿ ಶುಭಕಲ್ಯಾಣ್ ಕಾರ್ಯಕ್ರಮದಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸುತ್ತಿಈ ಘಟನೆ ನಡೆದಿದೆ.