News Karnataka Kannada
Monday, April 29 2024
ತುಮಕೂರು

ಕೊರಟಗೆರೆ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ, ಸವಾರ ಸಾವು

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಮದೇನೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಎಲೆಕ್ಟ್ರಿಕ್ ಪೋಲ್‌ಗೆ ಡಿಕ್ಕಿ ಹೊಡೆದು, ರಸ್ತೆ ಬದಿಯ ರೈತನ ಜಮೀನಿಗೆ ಬಿದ್ದಿದೆ.
Photo Credit : Freepik

ಕೊರಟಗೆರೆ: ಕೊರಟಗೆರೆಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು,  ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನಿಗೆ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ, ಬಸವರಾಜು ವಡ್ಡಗೆರೆ ಮಾರ್ಗವಾಗಿ ಕೊರಟಗೆರೆಗೆ ಬರುವಾಗ ಬೈಪಾಸ್ ನಲ್ಲಿ ರಸ್ತೆ ದಾಟುವ ಸಂದರ್ಭ, ಕಾರು ವೇಗವಾಗಿ ಬರುತ್ತಿದ್ದ ಕಾರಣ ನಿಯಂತ್ರಣಕ್ಕೆ ಸಿಗದೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ತೀವ್ರ ಗಾಯಗೊಂಡ ಬಸವರಾಜು ಅವರನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು