ತುಮಕೂರು: ಹಾವು ಕಚ್ಚಿದ್ದು ಅರಿವಿಗೆ ಬಾರದೆ ವೈದ್ಯ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ಕೇರಳ ಮೂಲದ ಅದಿತ್ ಬಾಲಕೃಷ್ಣನ್ ಎಂಬ ವೈದ್ಯ ವಿದ್ಯಾರ್ಥಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಬುಧವಾರ ನಡೆದ ವಿವಿ ಘಟಿಕೋತ್ಸವದಲ್ಲಿ ಪದವಿ ಪಡೆದ ಬಳಿಕ ಪಾರ್ಕಿನಲ್ಲಿ ನಿಂತಿದ್ದ ವೇಳೆ ಹಾವು ಕಚ್ಚಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಈತನಿಗೆ ಹಾವು ಕಚ್ಚಿರುವುದು ಗಮನಕ್ಕೆ ಬಂದಿಲ್ಲ. ಮನೆಗೆ ಬಂದ ಕೂಡಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಮೃತ ವಿದ್ಯಾರ್ಥಿ ಶವವನ್ನು ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ರವಾನಿಸಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.