ಎಂ.ಎನ್.ಕೋಟೆ: ಕುರಿ ದೊಡ್ಡಿಗೆ ನುಗ್ಗಿದ ಚಿರತೆ ಎಂಟು ಕುರಿಗಳನ್ನು ಬಲಿ ಪಡೆದು ಎರಡು ಕುರಿಗಳನ್ನು ಹೊತ್ತೊಯ್ದ ಘಟನೆ ಶನಿವಾರ ಮುಂಜಾನೆ ಗುಬ್ಬಿ ಕಸಬಾ ಹೋಬಳಿ ಜಿ.ಹೊಸಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತರಾದ ಲಕ್ಷ್ಮಮ್ಮ ಗಂಗಣ್ಣ ಅವರು ಸಾಕಿದ ಕುರಿಗಳನ್ನು ಸಾಕುವ ದೊಡ್ಡಿಗೆ ನುಗ್ಗಿದ ಚಿರತೆ ಕುರಿಗಳ ಮೇಲೆ ದಾಳಿ ನಡೆಸಿದ್ದು ಎಂಟು ಕುರಿಗಳ ಕತ್ತು ಸೀಳಿ ಬಲಿ ಪಡೆದಿದೆ.
ಕುರಿ ಸಾಕುವ ಕಾಯಕದಲ್ಲಿರುವ ಈ ಬಡ ಕುಟುಂಬ ಜೀವನೋಪಾಯಕ್ಕೆ ಇದ್ದ ಕುರಿಗಳನ್ನು ಕಳೆದುಕೊಂಡಬೀದಿಪಾಲಾಗಿದ್ದು ಸರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ರೂಗಳ ನಷ್ಟ ಸಂಭವಿಸಿದೆ ಎಂದು ಅಂದಾಜುಮಾಡಲಾಗಿದೆ.
ಕಳೆದ ಗುರುವಾರ ಕಸಬ ಹೋಬಳಿ ಹೇರೂರು ಗ್ರಾಮದ ಬಳಿ ಹಾಡುಹಗಲೇ ಸುಮಾರು ಮೂರು ಚಿರತೆಗಳುರಸ್ತೆ ದಾಟುವಾಗ ವಾಹನ ಸವಾರರಿಗೆ ಅಡ್ಡ ಸಿಕ್ಕ ಘಟನೆ ನಡೆದ ಬೆನ್ನಲ್ಲೇ ಚಿರತೆ ದಾಳಿ ನಡೆಸಿರುವುದು ಸ್ಥಳೀಯ ರೈತರಲ್ಲಿ ಆತಂಕ ಮೂಡಿಸಿದೆ.
ಪದೇ ಪದೇ ತಾಲೂಕಿನಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಬಗ್ಗೆ ದೂರುಗಳು ಸಾಕಷ್ಟು ಕೇಳಿಬರುತ್ತಿದ್ದು, ಚಿರತೆ ಹಾವಳಿ ಸ್ಥಳೀಯ ಕೃಷಿಕರಲ್ಲಿ ಆತಂಕ ಮೂಡಿಸಿದ್ದು ಈ ನಿಟ್ಟಿನಲ್ಲಿ ಚಿರತೆಗಳ ಉಪಟಳವನ್ನು ತಪ್ಪಿಸಬೇಕು ಎಂದು ಮುದ್ದನಹಳ್ಳಿ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ತ್ರಿವಳಿ ತಲಾಖ್ ನಿಂದ ನೊಂದಿದ್ದ ಮುಸ್ಲಿಂ ಮಹಿಳೆಯೊಬ್ಬಳು ಹಿಂದೂ ಧರ್ಮಕ್ಕೆ ಮತಾಂತರಗೊಂಡು ಹಿಂದೂ ಯುವಕನನ್ನು ಮದುವೆ ಆಗಿರುವ ಘಟನೆ ಉತ್ತರಪ್ರದೇಶದಲ್ಲಿ…
ಶಿಕಾರಿಗೆ ತೆರಳಿದ್ದ ಯುವಕನ ಮೇಲೆ ಮಿಸ್ ಫೈರ್ ಆದ ಘಟನೆ ಚಿಕ್ಕಮಗಳೂರಿನ ತಾಲೂಕಿನ ಉಲುವಾಗಿಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಲ್ಲಿ…
ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ…
ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…