News Karnataka Kannada
Friday, May 10 2024
ತುಮಕೂರು

ಜಾತಿ, ಧರ್ಮ, ಸಮುದಾಯಗಳ ಹೆಸರಿನಲ್ಲಿ ಸಮಾರಂಭ ಏರ್ಪಡಿಸುವಂತಿಲ್ಲ: ಜಿಲ್ಲಾಧಿಕಾರಿ

ಚುನಾವಣೆ
Photo Credit : News Kannada

ತುಮಕೂರು: ವಿಧಾನಸಭಾ ಚುನಾವಣೆ ಮಾದರಿ ನೀತಿ ಸಂಹಿತೆಯನ್ವಯ ಯಾವುದೇ ಜಾತಿ,ಧರ್ಮ,ಸಮುದಾಯಗಳ ಹೆಸರಿನಲ್ಲಿ ಸಮಾವೇಶ,ಸಮಾರಂಭ ಏರ್ಪಡಿಸಲು ಯಾವುದೇ ಪಕ್ಷ,ಅಭ್ಯರ್ಥಿಗಳಿಗೆ ಅನುಮತಿ ನೀಡಲು ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ತಮ್ಮ ಕಚೇರಿಯಲ್ಲಿ ಮಂಗಳವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಪಕ್ಷದ ಹೆಸರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಲಾಗುವುದು.

ಜಾತ್ರೆ, ಉತ್ಸವ, ಇಫ್ತಿಯಾರ್ ಕೂಟ ನಡೆಯುವ ಸಂದರ್ಭದಲ್ಲಿ ಅನುಮತಿ ನೀಡುವಾಗ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವ ಬಗ್ಗೆ ಷರತ್ತುಗಳನ್ನು ವಿಧಿಸಲಾಗುವುದು. ಧಾರ್ಮಿಕ ಕಾರ್ಯಗಳಿಗೆ ಸಂಬಂಧಿಸಿದಂತೆ ದೇವಾಲಯ, ಮಸೀದಿ, ಚರ್ಚ್‌ಗಳಲ್ಲಿ ನಿತ್ಯ ಅನ್ನ ದಾಸೋಹಕ್ಕೆ  ಅವಕಾಶವಿದೆ. ಆದರೆ ಸಂಭಾವ್ಯ ಚುನಾವಣಾ ಅಭ್ಯರ್ಥಿಗಳು ಜಾತ್ರೆ ಸಂದರ್ಭದಲ್ಲಿ ಆಮಿಷಗಳಿಗೆ ಒಳಗಾಗುವಂತೆ ಮತದಾರರನ್ನು ಸೆಳೆಯಲು ಅನ್ನದಾಸೋಹ, ಸೀರೆ ಸೇರಿದಂತೆ ಇತರೆ ವಸ್ತುಗಳನ್ನು ಹಂಚುವ ಪ್ರಯತ್ನ ಮಾಡುವಂತಿಲ್ಲ ಎಂದು ತಿಳಿಸಿದರಲ್ಲದೆ ಯಾವುದೇ ರಾಜಕೀಯ ಪಕ್ಷದ ಸಭೆ, ಸಮಾರಂಭವನ್ನು ಶಾಲಾ ಆವರಣದಲ್ಲಿ ನಡೆಸಲು ಮನವಿ ಬಂದಾಗ ಶಾಲಾ ತರಗತಿ ನಡೆಯದಿರುವ ಸಮಯದಲ್ಲಿ ಆಯೋಜಿಸಲು ಅನುಮತಿ ನೀಡಲಾಗುವುದು. ಆದರೆ ಶಾಲಾ ಕೊಠಡಿಗಳಲ್ಲಿ ಪಕ್ಷದ ಕಾರ್ಯಕರ್ತರ ಸಭೆ, ಸಮಾರಂಭವನ್ನು ನಡೆಸಲು ಅವಕಾಶವಿಲ್ಲವೆಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು