ಪಾವಗಡ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾಗಿದ್ದಾರೆ. ತಾಲ್ಲೂಕಿನ ಕೆಂಚಮ್ಮನಹಳ್ಳಿಯಲ್ಲಿ ವಿದ್ಯುತ್ ತಗುಲಿ ಮಂಗಳಗೌರಮ್ಮ (25) ಮೃತಪಟ್ಟಿದ್ದಾರೆ. ಈ ಘಟನೆ ಸೋಮವಾರ ನಡೆದಿದೆ.
ಮೃತರ ಸಂಬಂಧಿಕರು ಬೆಸ್ಕಾಂ ಕಚೇರಿ ಮುಂಭಾಗ ಮೃತ ದೇಹ ಇಟ್ಟು ರಾತ್ರಿ ಪ್ರತಿಭಟನೆ ನಡೆಸಿದರು. ಗ್ರಾಮದ ಬಳಿಯ ಜಮೀನಿನಲ್ಲಿ ವಿದ್ಯುತ್ ತಂತಿ ತಗುಲುವ ರೀತಿ ಇದೆ. ದುರಸ್ತಿ ಪಡಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು.
ಅಧಿಕಾರಿಗಳ ನಿರ್ಲಕ್ಷ್ಯ ಒಂದು ಜೀವ ಹೋಗಲು ಕಾರಣರಾಗಿದೆ ಎಂದು ಕುಟುಂಬ ಸದಸ್ಯರು ಆರೋಪಿಸಿದರು.