News Karnataka Kannada
Thursday, May 02 2024
ತುಮಕೂರು

ತುಮಕೂರಿಗೆ ಭೇಟಿ ನೀಡಿದ ರೈಲ್ವೆ ಇಲಾಖೆ ಅಧಿಕಾರಿಗಳು

Railway officials visit Tumakuru
Photo Credit : By Author

ತುಮಕೂರು: ತುಮಕೂರು ಜಿಲ್ಲೆಯಲ್ಲಿ ರೈಲ್ವೆ ಇಲಾಖೆಯಿಂದ ಜನರಿಗೆ ಅನುಕೂಲಕ್ಕಾಗಿ ವಿವಿಧಕಾಮಗಾರಿಗಳನ್ನು ಕೈಗೊಳ್ಳುವಂತೆ ಸಂಸದ ಜಿ.ಎಸ್.ಬಸವರಾಜು ಪತ್ರ ಬರೆದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯ ವಿವಿಧ ಅಧಿಕಾರಿಗಳು ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ನಗರದ ಪ್ರವಾಸಿ ಮಂದಿರದಲ್ಲಿ ಸಂಸದರು ಮತ್ತು ಸ್ಥಳೀಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸಂಸದ ಜಿ.ಎಸ್.ಬಸವರಾಜು ಅವರು, ನಗರದ ಮೂಲಕ ಹಾದು ಹೋಗುವ ರೈಲ್ವೆ ಹಳಿಗೆ ಗೋಕುಲ ಬಡಾವಣೆ, ಮಹಾಲಕ್ಷ್ಮಿ ಬಡಾವಣೆಯ 80 ಅಡಿ ರಸ್ತೆ, ಭೀಮಸಂದ್ರ ಬಳಿ ಪೆಡಸ್ಟೀಯಲ್ ಅಂಡರ್ ಪಾಸ್, ಗುಬ್ಬಿ ಪಟ್ಟಣದಲ್ಲಿ ರೈಲ್ವೆ ಮೇಲ್ಸೇತುವೆ ಹಾಗೂ ನಿಟ್ಟೂರು ಬಳಿ ರೈಲ್ವೆ ಮೇಲ್ಸೇತುವೆಗಳ ನಿರ್ಮಾಣ ಕುರಿತಂತೆ ರೈಲ್ವೆ ಇಲಾಖೆಗೆ ಹಾಗೂ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದರು.

ಸಂಸದ ಪತ್ರದ ಹಿನ್ನೆಲೆಯಲ್ಲಿ ಇಂದು ದಕ್ಷಿಣ ರೈಲ್ವೆ ಬೆಂಗಳೂರು ವಿಭಾದ ಎಡಿಆರ್‌ಎಂ ಲಕ್ಷ್ಮಣ್‌ಸಿಂಗ್, ವಿಭಾಗೀಯ ಮಾರುಕಟ್ಟೆ ವ್ಯವಸ್ಥಾಪಕ ಎ.ಎನ್.ಕೃಷ್ಣಾರೆಡ್ಡಿ, ಮಖ್ಯ ಇಂಜಿನಿಯರ್ ಪಿ.ಆರ್.ಎಸ್ ರಾಮನ್, ಡಿಇಎನ್ ಪುಷ್ಪೇಂದ್ರಕುಮಾರ್, ಎಡಿಇಎನ್ ರಜತ್ ಹಾಗೂ ಸ್ಥಳೀಯ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ, ಗೋಕುಲ ಬಡಾವಣೆ, ಬಟವಾಡಿ 80 ಅಡಿ ರಸ್ತೆ,ಭೀಮಸಂದ್ರ, ಗುಬ್ಬಿ ಪಟ್ಟಣ ಹಾಗೂ ನಿಟ್ಟೂರಿಗೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರಲ್ಲದೆ, ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಈ ವೇಳೆ ಮಾತನಾಡಿದ ಸಂಸದ ಜಿ.ಎಸ್.ಬಸವರಾಜು, ದಿನದಿಂದ ದಿನಕ್ಕೆ ತುಮಕೂರು ಮೂಲಕ ಓಡಾಡುವ ರೈಲುಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಗೋಕಲು ಬಡಾವಣೆ ಮತ್ತು ಬಟವಾಡಿಯ ಮಹಾಲಕ್ಷ್ಮಿನಗರದ ರೈಲ್ವೆ ಗೇಟ್‌ಗಳ ಬಳಿ ಅಂಡರ್ ಪಾಸ್ ಅಥವಾ ಓವರ್‌ಬ್ರಿಡ್ಜ್ ನಿರ್ಮಾಣ ಮಾಡಬೇಕೆಂಬುದು ನಮ್ಮ ಒತ್ತಾಯವಾಗಿತ್ತು. ನಗರದ ಶೇ.30 ಭಾಗದ ಜನರು ರೈಲ್ವೆ ಹಳಿಯಿಂದ ಆಚೆಗೆ ವಾಸ ಮಾಡುತ್ತಿದ್ದಾರೆ. ಅವರು ಪ್ರತಿ ಬಾರಿ ರೈಲ್ವೆ ಗೇಟ್ ಹಾಕಿದಾಗಲು ಹತ್ತಾರು ನಿಮಿಷಗಳ ಕಾಯ ಬೇಕಾದ ಪರಿಸ್ಥಿತಿ ಇದೆ. ಹಾಗಾಗಿ ಇಲ್ಲಿ ಅಂಡರ್ ಅಥವಾ ಓವರ್ ಬ್ರಿಡ್ಜ್ ನಿರ್ಮಾಣಗೊಂಡರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ತುಮಕೂರು ನಗರದ ಹೊರತಾಗಿ ಈಗಾಗಲೇ ಭೀಮಸಂದ್ರ ಬಳಿ ಅವೈಜ್ಞಾನಿಕ ಅಂಡರ್‌ಪಾಸ್ ನಿರ್ಮಾಣದಿಂದ ಮಳೆಗಾಲದಲ್ಲಿ ಜನರು ಓಡಾಡಲು ಪರದಾಡುವಂತಹ ಸ್ಥಿತಿ ಇದೆ.ಹಾಗಾಗಿ ಆ ಭಾಗದಲ್ಲಿ ಒಂದು ಪೆಡಸ್ಟಿಯಲ್ ಅಂಡರ್ ಪಾಸ್ ನಿರ್ಮಾಣ ಮಾಡಬೇಕೆಂಬುದು ನಮ್ಮ ಕೋರಿಕೆಯಾಗಿದೆ. ಇದರ ಜೊತೆಗೆ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಮೇಲ್ಸೇತುವೆ ನಿರ್ಮಾಣದಿಂದ ಹೆಚ್ಚಿನ ಜನರಿಗೆ ಅನುಕೂಲವಾಗಲಿದೆ. ಅಲ್ಲದೆ ನಿಟ್ಟೂರು ಗ್ರಾಮದ ಬಳಿ ಅಂದರೆ ನಿಟ್ಟೂರು ಕಲ್ಲೂರು ನಡುವೆ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕುರಿತಂತೆ ಪತ್ರ ಬರೆದಿದ್ದೆ.

ಇಂದು ಅಧಿಕಾರಿಗಳು ಬಂದು ಜಾಗದ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.ಡಿ.ಪಿ.ಆರ್. ತಯಾರಿಸಿ, ಶೀಘ್ರವೇ ಕಾಮಗಾರಿ ಆರಂಭವಾಗುವ ನಿರೀಕ್ಷೆ ಇದೆ. ಇದರ ಜೊತೆಗೆ ಬೆಂಗಳೂರು ಮತ್ತು ತುಮಕೂರು ನಡುವೆ ಹೆಚ್ಚಿನ ಡೆಮೋ ರೈಲು ಓಡಿಸಲು ಸಹ ಅಧಿಕಾರಿಗಳು ಮತ್ತು ರೈಲ್ವೆ ಮಂತ್ರಿಗಳಿಗೆ ಮನವಿ ಮಾಡಲಾಗಿದೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು