ತುಮಕೂರು: ರಾಜ್ಯ ಸರಕಾರ ಪಡಿತರ ಚೀಟಿದಾರರಿಗೆ ವಿತರಿಸಲು ಪಡಿತರ ಕೇಂದ್ರಗಳಿಗೆ ವಿತರಿಸಲು ದಾಸ್ತಾನು ಮಾಡಿರುವ ರಾಗಿಯು ಕಲ್ಲು, ಮಣ್ಣುಗಳಿಂದ ಕೂಡಿದ್ದು, ಉಪಯೋಗಿಸಲು ಯೋಗ್ಯವಿಲ್ಲದ ರಾಗಿಯನ್ನು ಜನಸಾಮಾನ್ಯರಿಗೆ ವಿತರಿಸಲು ಹೊರಟಿದ್ದಾರೆ ಎಂದು ಜಿ.ಪಂನ ಮಾಜಿ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ ಆರೋಪಿಸಿದ್ದಾರೆ.
ಅವರು ಶಿರಾ ನಗರದ ಎಪಿಎಂಸಿ ಆವರಣದಲ್ಲಿರುವ ಗೋಡಾನ್ಗೆ ಭೇಟಿ ನೀಡಿ ಅಲ್ಲಿನ ರಾಗಿಯನ್ನು ಪರಿಶೀಲಿಸಿ ಮಾತನಾಡಿದರು. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಆಹಾರ ನಿಗಮದ ಗೋಡಾನ್ಗೆ ಭೇಟಿ ನೀಡಿದ್ದೇನೆ. ಈ ರಾಗಿಯನ್ನು ಮನುಷ್ಯರು ತಿನ್ನಲು ಸಾಧ್ಯವಿಲ್ಲ. ಅಂತಹ ಕಳಪೆ ರಾಗಿ ದಾಸ್ತಾನು ಮಾಡಿದ್ದಾರೆ. ಕಳಪೆ ರಾಗಿಯ ಬಗ್ಗೆ ಪ್ರಶ್ನೆ ಮಾಡಿದರೆ ಅಧಿಕಾರಿಗಳು ಲಘುವಾಗಿ ಉತ್ತರ ನೀಡುತ್ತಾರೆ. ಕೂಡಲೇ ಕಳಪೆ ರಾಗಿಯನ್ನು ಬದಲಾಯಿಸಲು ತುರ್ತು ಕ್ರಮ ಕೈಗೊಳ್ಳಬೇಕು. ಹಾಗೂ ಈ ಇದೇ ರೀತಿಯ ಕಳಪೆ ರಾಗಿ ಖರೀದಿ ಮಾಡಿ ಮುಂದಿನ ದಿನಗಳಲ್ಲಿ ವಿತರಿಸಿದರೆ ಲೋಕಾಯುಕ್ತರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…