News Karnataka Kannada
Sunday, May 05 2024
ತುಮಕೂರು

ಪ್ರವಾಸಿ ತಾಣ ದೇವರಾಯನದುರ್ಗಕ್ಕೆ ರೋಪ್ ವೇ : ಬಿ.ಸುರೇಶ್‌ಗೌಡ

Ropeway to Devarayanadurga: B Suresh Gowda
Photo Credit : News Kannada

ತುಮಕೂರು: ಐತಿಹಾಸಿಕ ಪ್ರವಾಸಿ ತಾಣವಾದ ದೇವರಾಯನದುರ್ಗ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿ ಊರ್ಡಿಗೆರೆ ಹೋಬಳಿ ಸರ್ವತ್ತೋಮುಖ ಅಭಿವೃದ್ಧಿಪಡಿಸುವುದೇ ನನ್ನ ಮುಂದಿನ ಗುರಿಯಾಗಿದೆ ಎಂದು ತುಮಕೂರು ಗ್ರಾಮಾಂತರದ ಬಿಜೆಪಿ ಅಭ್ಯರ್ಥಿ ಬಿ.ಸುರೇಶ್‌ಗೌಡ ತಿಳಿಸಿದರು.

ತುಮಕೂರು ಗ್ರಾಮಾಂತರದ ದೇವರಾಯನ ದುರ್ಗದ ಶ್ರೀ ಯೋಗನರಸಿಂಹ ಸ್ವಾಮಿ ಮತ್ತು ಬೋಗ ನರಸಿಂಹ ಸ್ವಾಮಿಗೆ ಪೂಜೆ ಸಲ್ಲಿಸಿ ನಂತರ ಚುನಾವಣಾ ಪ್ರಚಾರ ಆರಂಭಿಸಿ ಮಾತನಾಡಿದರು, ಊರ್ಡಿಗೆರೆ ಹೋಬಳಿಗೆ ಪದವಿ ಕಾಲೇಜು ಹಾಗೂ ದೇವರಾಯನದುರ್ಗಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಊರ್ಡಿಗೆರೆಗೆ ಪದವಿ ಕಾಲೇಜಿನ ಅಗತ್ಯವಿದೆ. ಇಲ್ಲಿಗೆ ವಸಂತನರಾಸಪುರ, ದಾಬಸಪೇಟೆ ಕೈಗಾರಿಕಾ ಪ್ರದೇಶ ಎರಡೂ ಹತ್ತಿರದಲ್ಲಿವೆ. ಇವುಗಳ ಪ್ರಯೋಜನ ಪಡೆಯಬೇಕಾದರೆ ಇಲ್ಲಿನ ಮಕ್ಕಳಿಗೆ ಉನ್ನತ ಶಿಕ್ಷಣದ ಅಗತ್ಯವಿದೆ. ಹೆಣ್ಣು ಮಕ್ಕಳಿಗೆ ಮನೆ ಬಾಗಿಲಲ್ಲೇ ಶಿಕ್ಷಣ ಸಿಗುವಂತಾಗಬೇಕಾಗಿದೆ. ನಾನು ಶಾಸಕನಾಗಿ ಆಯ್ಕೆಯಾದರೆ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುತ್ತೇನೆ. ಹಳ್ಳಿ ಮಕ್ಕಳಿಗೆ ಗುಣಮಟ್ಟದ ಇಂಗ್ಲಿಷ್ ಶಿಕ್ಷಣ ಒದಗಿಸುತ್ತೇನೆ ಎಂದು ಪೋಷಕರಿಗೆ ಭರವಸೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು