ತುಮಕೂರು

ಅಭಿವೃದ್ಧಿ ಹರಿಕಾರರನ್ನು ಆಯ್ಕೆ ಮಾಡಿ: ನಳೀನ್‌ಕುಮಾರ್ ಕಟೀಲ್

ತುಮಕೂರು:  ಜನತೆ ಮೋಸಗಾರ ಶಾಸಕರನ್ನು ಮನೆಗೆ ಕಳುಹಿಸಿ, ಅಭಿವೃದ್ದಿಯ ಹರಿಕಾರರಾಗಿರುವ ಸುರೇಶಗೌಡ ರನ್ನು ಆಯ್ಕೆ ಮಾಡಲು ತುದಿಗಾಲಲ್ಲಿ ನಿಂತಿದ್ದು, ಮೇ.೧೩ರ ಫಲಿತಾಂಶದಲ್ಲಿ ಅದು ವ್ಯಕ್ತವಾಗಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನಕುಮಾರ್ ಕಟೀಲ್ ತಿಳಿಸಿದ್ದಾರೆ.

ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಸುರೇಶಗೌಡ ಅವರ ಪರವಾಗಿ ಮತಯಾಚಿಸಲು ಆಗಮಿಸಿ, ಕೈದಾಳದ ಶ್ರೀಚನ್ನಕೇಶವಸ್ವಾಮೀಗೆ ಪೂಜೆ ಸಲ್ಲಿಸಿದ ನಂತರ ತೆರೆದ ಜೀಪಿನಲ್ಲಿ ಮೆರವಣಿಗೆಯ ವೇಳೆ ಮಾತನಾಡಿದ ಅವರು, ಸುರೇಶಗೌಡರ ಕಾಲದಲ್ಲಿ ಜಕಣಚಾರಿ ಹುಟ್ಟಿದ ಈ ಊರಿನಲ್ಲಿ ಅವರ ಹೆಸರಿನಲ್ಲಿಯೇ ಒಂದು ಸಮುದಾಯಭವನವನ್ನು ನಿರ್ಮಿಸಿದರೆ, ಹಾಲಿ ಶಾಸಕರು ಅದರ ಬಾಗಿಲು ತೆಗೆಯುವ ಗೋಜಿಗೂ ಹೋಗದೆ, ಪಾಳು ಬೀಳುವಂತೆ ಮಾಡಿದ್ದಾರೆ. ಈ ಕ್ಷೇತ್ರಕ್ಕೆ ಅಭಿವೃದ್ದಿಯ ಹರಿಕಾರರು ಬೇಕೋ, ಇಲ್ಲ ಜನರಿಗೆ ಮೋಸ ಮಾಡಿ ಗೆದ್ದ ಶಾಸಕರು ಬೇಕೋ ನೀವೇ ತೀರ್ಮಾನ ಮಾಡಿಕೊಂಡು ಮತ ನೀಡಿ ಎಂದರು.

ಹಾಲಿ ಶಾಸಕರನ್ನು ಮೋಸಗಾರ ಎಂದು ನಾನು ಹೇಳುತ್ತಿಲ್ಲ.ಈ ರಾಜ್ಯದ ಉಚ್ಚ ನ್ಯಾಯಾಲಯ ಹೇಳುತ್ತಿದೆ. ದೇಶ ಮತ್ತು ರಾಜ್ಯದಲ್ಲಿರುವ ಡಬಲ್ ಇಂಜಿನ್ ಸರಕಾರ ಜನರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಹತ್ತಾರು ವರ್ಷಗಳ ಕಾಲ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಆಳ್ವಿಕೆ ಮಾಡಿದ್ದರೂ ರೈತರು, ಬಡವರು ಇವರಿಗೆ ಜ್ಞಾಪಕಕ್ಕೆ ಬರಲಿಲ್ಲ. ರೈತರ ಖಾತೆಗೆ ನೇರವಾಗಿ ಹಣ ಹಾಕಲು ಬಿಜೆಪಿಯೇ ಬರಬೇಕಾಯಿತು. ಉಜ್ವಲ ಯೋಜನೆಯ ಮೂಕ ಗ್ಯಾಸ್,ನಿರ್ಮಲ್ ಭಾರತ್ ಯೋಜನೆಯ ಮೂಲಕ ಶೌಚಾಲಯ,ಜನಧನ್ ಯೋಜನೆಯ ಮೂಲಕ ಬ್ಯಾಂಕ್ ಖಾತೆ ನೀಡಿದರೆ, ರಾಜ್ಯದ ಬಿಜೆಪಿ ಸರಕಾರ ವಿದ್ಯಾನಿಧಿ,ಉಚಿತ ಸೈಕಲ್,ಹಾಲಿಗೆ ಪ್ರೋತ್ಸಾಹಧನ ನೀಡಿ ಬಡಜನರು ಘನತೆಯಿಂದ ಬಾಳುವ ಅವಕಾಶ ಕಲ್ಪಿಸಿದ್ದು ನರೇಂದ್ರಮೋದಿ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ಭಾರತೀಯ ಜನತಾಪಾರ್ಟಿ ಸರಕಾರ.ಇದನ್ನು ಪ್ರತಿಯೊಬ್ಬ ಮತದಾರರು ಅರಿತುಕೊಳ್ಳಬೇಕೆಂದರು.

ಗ್ರಾಮಾಂತರ ಕ್ಷೇತ್ರದ ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ ಹೆಬ್ಬೂರು-ಗೂಳೂರು ಏತ ನೀರಾವರಿ ಯೋಜನೆ ಜಾರಿಯಾಗಿದ್ದು ಸುರೇಶಗೌಡರು ಶಾಸಕರಾಗಿದ್ದ ಕಾಲದಲ್ಲಿ,ಮುಖ್ಯಮಂತ್ರಿಯಾದಿಯಾಗಿ ಎಲ್ಲ ಸಚಿವರೊಂದಿಗೆ ಜಗಳ ಮಾಡಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ದಿ ಮಾಡಿದ್ದಾರೆ.ಆದರೆ ೨೦೧೮ ರಲ್ಲಿ ನಕಲಿ ಬಾಂಡ್ ಹಂಚಿ ಆಯ್ಕೆಯಾದ ಶಾಸಕರು ಅಭಿವೃದ್ದಿ ಬಿಟ್ಟು ಥೈಲಾಂಡ್, ಗೋವಾ ಅಂತ ಪ್ರವಾಸ ಮಾಡಿಕೊಂಡು ಕ್ಷೇತ್ರದ ಅಭಿವೃದ್ದಿಯನ್ನು ಮರೆತಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಮನೆ ಮಠ ಬಿಟ್ಟು ಸುರೇಶಗೌಡರು ನಿಮ್ಮ ಸೇವೆ ಮಾಡಿದ್ದಾರೆ.ಮುಂಬರುವ ಬಿಜೆಪಿ ಸರಕಾರದ ಅವರು ಸಾವಿರಾರು ಕೋಟಿ ಅನುದಾನ ತಂದು ಈ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ದಿ ಪಡಿಸಲಿದ್ದಾರೆ ಎಂದು ನಳೀನಿಕುಮಾರ್ ಕಟೀಲ್ ಭರವಸೆ ನೀಡಿದರು.

ಕೈದಾಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲ್ ಅವರನ್ನು ಮಹಿಳೆಯರು ಪೂರ್ಣಕುಂಬ ಸ್ವಾಗತ ಮಾಡಿದರು.ನಂತರ ಕೈದಾಳದ ಶ್ರೀಚನ್ನಕೇಶವ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು.ತದನಂತರ ತೆರೆದ ಜೀಪಿನಲ್ಲಿಯೇ ಹೆತ್ತೇನಹಳ್ಳಿಗೆ ತೆರಳಿ, ಶ್ರೀಹೆತ್ತೇನಹಳ್ಳಿ ಮಾರಮ್ಮ ದೇವಿಗೆ ಪೂಜೆ ಸಲ್ಲಿಸಿದರು.

ಈ ವೇಳೆ ತುಮಕೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಬಿ.ಸುರೇಶಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಹೆಬ್ಬಾಕ,ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ, ,ನ.ಲ.ನರೇಂದ್ರಬಾಬು, ವೈ.ಹೆಚ್.ಹುಚ್ಚಯ್ಯ, ಬೆಳ್ಳಿಲೋಕೇಶ್‌ತಾಲೂಕು ಬಿಜೆಪಿ ಅಧ್ಯಕ್ಷ ಡಿ.ಎನ್.ಶಂಕರಪ್ಪ,ಸಿದ್ದೇಗೌಡ,ಉಮಾಶಂಕರ್, ಶಿವಕುಮಾರ್,ರಾಜಣ್ಣ,ನರಸಿಂಹಮೂರ್ತಿ, ವೆಂಕಟೇಶ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Sneha Gowda

Recent Posts

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

39 mins ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

46 mins ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

57 mins ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

1 hour ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

1 hour ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

2 hours ago