ತುಮಕೂರು: ತುರುವೇಕೆರೆ ತಾಲೂಕಿನ ಜೋಡಗಟ್ಟೆ ಗ್ರಾಮದ ಬಳಿ ಕಾರು ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.
ಮೃತರನ್ನು ತಿಪಟೂರು ಮೂಲದ 21 ವರ್ಷದ ಅನಿಲ್ ಕುಮಾರ್, ನರಸಿಂಹ ಮೂರ್ತಿ (21) ಹಾಗೂ ಕಾವ್ಯಾ (19) ಎಂದು ಗುರುತಿಸಲಾಗಿದೆ. ಆದಿಚುಂಚನಗಿರಿ ಮಠಕ್ಕೆ ಹೋಗಿ ವಾಪಸಾಗುವಾಗ ಘಟನೆ ನಡೆದಿದೆ.
ಸ್ಥಳಕ್ಕೆ ತುರುವೇಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.