ತುಮಕೂರು: ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠದಲ್ಲಿ ಸಂಭ್ರಮ ಸಡಗರ ಮನೆ ಮಾಡಿದೆ. ಸಿದ್ದಗಂಗಾ ಮಠದ ಶತಾಯುಷಿ ಶಿವೈಕ್ಯ ಶಿವಕುಮಾರ ಶ್ರೀಗಳ 117ನೇ ಜಯಂತೋತ್ಸವ ಹಾಗೂ ಗುರುವಂದನ ಕಾರ್ಯಕ್ರಮ ಆಚರಣೆಗೆ ಇಂದು ಬೆಳಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ಆರಂಭವಾಗಿವೆ.
ಶ್ರೀಗಳ ಜಯಂತೋತ್ಸವದ ಹಿನ್ನೆಲೆ ಮಠಕ್ಕ ಭಕ್ತ ಸಾಗರವೇ ಹರಿದು ಬರುತ್ತಿದೆ. ಇದು ಶ್ರೀ ಶಿವಕುಮಾರ ಸ್ವಾಮೀಜಿಗಳಿಲ್ಲದೇ ಶ್ರೀಮಠದಲ್ಲಿ ನಡೆಯುತ್ತಿರುವ ಶ್ರೀಗಳ 6ನೇ ಜನ್ಮದಿನವಾಗಿದೆ.
ಶ್ರೀಗಳ ಜಯಂತ್ಯೋತ್ಸವ ಹಿನ್ನೆಲೆ ಮಠದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಈ ಬಾರಿ ವಿಶೇಷವಾಗಿ ಪತಾಂಜಲಿ ಖ್ಯಾತಿಯ ಬಾಬಾ ರಾಮದೇವ್, ಸುತ್ತೂರು ಶ್ರೀಗಳು, ಮುಂಡರಗಿಯ ಅನ್ನದಾನೇಶ್ವರ ಶ್ರೀಗಳು, ಧಾರವಾಡ ಮುರುಘಾಮಠದ ಮಲ್ಲಿಕಾರ್ಜುನ ಶ್ರೀಗಳು, ಗದಗಿನ ವೀರಶೈವ ಪುಣ್ಯಾಶ್ರಮದ ಅಧ್ಯಕ್ಷರಾಗಿರುವ ಕಲ್ಲಯ್ಯ ಅಜ್ಜರವರು ಸೇರಿದಂತೆ, ಹಲವು ಪರಮ ಪೂಜ್ಯರು ಜಯಂತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಇಂದು ಬೆಳಗಿನ ಜಾವದಿಂದಲೇ ಶ್ರೀಮಠದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ಆರಂಭವಾಗಿವೆ. ಬೆಳ್ಳಿಗೆ 5 ಗಂಟೆಯಿಂದಲೇ ಪೂಜ್ಯರ ಗದ್ದುಗೆಗೆ ವಿಶೇಷ ಪೂಜೆ ನೆರವೇರಿದೆ. ಬಳಿಕ ಶಿವೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಪುತ್ತಳಿ ಮೆರವಣಿಗೆ ನಡೆಯಲಿದೆ. ಇನ್ನು ಬೆಳಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.
ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಇರೋ ಹಿನ್ನೆಲೆ ರಾಜಕಾರಣಿಗಳಿಗೆ ಜಯಂತ್ಯೋತ್ಸವಕ್ಕೆ ಆಹ್ವಾನ ನೀಡಿಲ್ಲ. ಅಲ್ಲದೇ ಎಸ್ಎಸ್ಎಲ್ಸಿ ಪರೀಕ್ಷೆ ಇರುವ ಹಿನ್ನೆಲೆ ಆದಷ್ಟು ಸರಳವಾಗಿ ಕಾರ್ಯಕ್ರಮ ಆಚರಣೆ ಮಾಡಲು ತಯಾರಿ ಮಾಡಿಕೊಳ್ಳಲಾಗಿದೆ.
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…
ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್ ನೀಡುತ್ತೇವೆ…
ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…
ದೊಡ್ಮನೆ ಕುಡಿ ಯುವರಾಜ್ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.
ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.