News Karnataka Kannada
Saturday, April 27 2024
ತುಮಕೂರು

ತುಮಕೂರು: ಇಂಗ್ಲಿಷ್ ಭಾಷೆ ಕಲಿಕೆ, ಬಳಕೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಆರಗ ಜ್ಞಾನೇಂದ್ರ

Complaint filed against Araga Gyanendra for comments on Kharge's complexion
Photo Credit : Twitter

ತುಮಕೂರು: ಬ್ರಿಟಿಷರು ಬಿಟ್ಟು ಹೋಗಿರುವ ಇಂಗ್ಲಿಷ್ ಭಾಷೆಗೆ ದಾಸರಾಗಿದ್ದೇವೆ. ಸ್ವಾಭಿಮಾನ ಬಿಟ್ಟು ಕಲಿಯುತ್ತಿದ್ದೇವೆ. ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಆಕ್ರೋಶ ಹೊರ ಹಾಕಿದರು.

ಮಂಗಳವಾರ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದ ನಂತರ ಮಾತನಾಡಿದರು. ವ್ಯಾಪಾರದ ಸಲುವಾಗಿ ದೇಶಕ್ಕೆ ಬಂದು ನಮ್ಮನ್ನು ಆಳಿದ್ದಾರೆ, ನಮ್ಮ ಸಂಸ್ಕೃತಿ ನಾಶ ಮಾಡಿದ್ದಾರೆ. ದೇಶವನ್ನೇ ಕೊಳ್ಳೆ ಹೊಡೆದಿದ್ದಾರೆ. ಕೊನೆಗೆ ಭಾಷೆ ಹೇರಿ ಹೋಗಿದ್ದಾರೆ. ಇಂಗ್ಲಿಷ್ ಕಲಿಯುವುದೇ ಅದ್ಭುತ ಎಂದು ಭಾವಿಸಿದ್ದೇವೆ ಎನ್ನುವ ಮೂಲಕ ಕನ್ನಡಿಗರ ಸ್ವಾಭಿಮಾನ ಕೆಣಕಿದರು.

‘ನಾನು ಸಚಿವನಾದ ನಂತರ ಗೃಹ ಇಲಾಖೆ ಆದೇಶಗಳನ್ನು ಕನ್ನಡದಲ್ಲೇ ನೀಡುತ್ತಿದ್ದೇನೆ. ಇದೇ ಮೊದಲ ಬಾರಿಗೆ ಪೊಲೀಸ್ ಕವಾಯಿತು ಹಾಗೂ ಇತರ ಸಂದರ್ಭಗಳಲ್ಲಿ ಕನ್ನಡದಲ್ಲೇ ನಿರ್ದೇಶನ ನೀಡುವಂತೆ ಆದೇಶಿಸಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು