ತುಮಕೂರು: ಮತದಾರರ ಪಟ್ಟಿಯ ಪರಿ?ರಣೆಗೆ ಅವಕಾಶ ನೀಡಲಾಗಿದ್ದು, ಮತದಾರರು ತಪ್ಪದೇ ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳಬೇಕು ಮತದಾರರ ಪಟ್ಟಿ ಪರಿ?ರಣೆ ಕಾರ್ಯದಲ್ಲಿ ಯಾವುದೇ ಮತದಾರರ ಹೆಸರು ಬಿಟ್ಟು ಹೋಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿ, ಜಿಲ್ಲೆಯ ಇಆರ್ಒ, ಇಒ, ಎಇಆರ್ಒ, ಹಾಗೂ ಇತರ ಅಧಿಕಾರಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ-2023, ಮನೆ ಮನೆ ಭೇಟಿ ಹಾಗೂ ಇತರೆ ಚುನಾವಣೆ ವಿಷಯಗಳ ಚರ್ಚಿಸಿ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ, ನಿರ್ದೇಶನಗಳನ್ನು ಅನುಸರಿಸಿ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ, 18 ವರ್ಷ ತುಂಬಿದ ಪ್ರತಿಯೊಬ್ಬರೂ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಸುತ್ತಮುತ್ತಲಿನ, ಅಕ್ಕಪಕ್ಕದವರಲ್ಲೂ ಈ ಜಾಗೃತಿ ಮೂಡಿಸಬೇಕು, ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ ಮತ್ತೆ ಸೇರ್ಪಡೆ ಮಾಡಿಸಿಕೊಳ್ಳಬಹುದು. ಮೊಬೈಲ್ ಸಂಖ್ಯೆ ಬದಲಾವಣೆ, ವಿಳಾಸ ಬದಲಾವಣೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಚುನಾವಣಾ ಆಯೋಗ, ಜಿಲ್ಲಾಡಳಿತ ನೀಡಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ದೋ?ರಹಿತ ಮತದಾರ ಪಟ್ಟಿ ಮೂಲ ಆಧಾರವಾಗಿದೆ. ಇದನ್ನು ಅರಿತು ಕಾರ್ಯೋನ್ಮುಖರಾಗಿ ಎಂದು ಕರೆ ನೀಡಿದರು. ಮತದಾರರ ಪಟ್ಟಿಗೆ ಮತದಾರರನ ಹೆಸರು ನೋಂದಾಯಿಸುವ ಬಗ್ಗೆ ಯಾವುದಾದರೂ ತೊಂದರೆ, ಗೊಂದಲಗಳಿದ್ದರೆ ಎಇಆರ್ಒ ಕಚೇರಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳುವಂತೆ ತಿಳಿಸಿದರು.