News Karnataka Kannada
Saturday, May 18 2024
ತುಮಕೂರು

ತುಮಕೂರು: ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ ಬೆಳ್ಳಿ ಲೋಕೇಶ್

Tumakuru: Belli Lokesh quits JD(S) to join BJP
Photo Credit : News Kannada

ತುಮಕೂರು: ಇತ್ತೀಚಗೆ ಜೆಡಿಎಸ್ ರಾಜ್ಯ ವಕ್ತಾರರ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಜೆಡಿಎಸ್ ಕೋಲಾರ ಜಿಲ್ಲಾ ಚುನಾವಣಾ ಉಸ್ತುವಾರಿ ಬೆಳ್ಳಿ ಲೋಕೇಶ್ ಭದ್ರಮ್ಮ ಛತ್ರದಲ್ಲಿರುವ ಬಿಜೆಪಿ ಪ್ರಚಾರ ಕಚೇರಿಯಲ್ಲಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ, ಶಾಸಕ ಜಿ.ಬಿ.ಜೋತಿಗಣೇಶ್, ಮಾಜಿ ಶಾಸಕ ಬಿ.ಸುರೇಶಗೌಡ ಹಾಗೂ ಹಲವು ಮುಖಂಡರ ಸಮ್ಮುಖದಲ್ಲಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಬೆಳ್ಳಿ ಲೋಕೇಶ್,ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷ ದೇವರಾಜು ಸೇರಿದಂತೆ ಹಲವರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎನ್.ರವಿಶಂಕರ್,ಸಂಘಟನಾತ್ಮಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ನಗರದಲ್ಲಿ ಆಗಿರುವ ಬದಲಾವಣೆಗೆ ಮತದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅತ್ಯಧಿಕ ಮತಗಳಿಂದ ಜ್ಯೋತಿಗಣೇಶ್ ಗೆಲುವು ಸಾಧಿಸಲಿದ್ದಾರೆ ಎಂದರು.

ಬಿಜೆಪಿಗೆ ಸೇರ್ಪಡೆಗೊಂಡು ಮಾತನಾಡಿದ ಬೆಳ್ಳಿ ಲೋಕೇಶ್ ರಾಜಕಾರಣದಲ್ಲಿ ಪ್ರಜಾಪ್ರಭುತ್ವ ಕಾಪಾಡುತ್ತಿರುವ ಏಕೈಕ ಪಕ್ಷ ಬಿಜೆಪಿ ಮಾತ್ರ, ಮಾಜಿ ಶಾಸಕ ಸುರೇಶ್ ಗೌಡರು ನನಗೆ ಬಿಜೆಪಿಗೆ ಸೇರ್ಪಡೆಯಾಗುವಂತೆ ಆಹ್ವಾನಿಸಿದರು, ಎಲ್ಲರೊಂದಿಗೆ ಪ್ರೀತಿ ವಿಶ್ವಾಸದಿಂದ ಇದ್ದಕಾರಣಕ್ಕೆ ಶಾಸಕ ಜ್ಯೋತಿಗಣೇಶ್ ಮನೆಗೆ ಬಂದು ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ್ದರು.

ರಾಜಕಾರಣದಲ್ಲಿ ವಿರೋಧಿಗಳಾದರೂ ಬಹುತೇಕರೊಂದಿಗೆ ಆತ್ಮೀಯತೆಯನ್ನು ಕಂಡುಕೊಂಡಿದ್ದೇನೆ, ಬಿಜೆಪಿಯಲ್ಲಿರುವ ಸ್ನೇಹಿತರು ನಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದ್ದಾರೆ ಎಂಬ ವಿಶ್ವಾಸವಿದೆ.ಪಕ್ಷ ನೀಡುವ ಜವಾಬ್ದಾರಿಯನ್ನು ಯಾವುದೇ ಲೋಪ ಬಾರದಂತೆ ಶಿರಸಾ ವಹಿಸಿ ಪಾಲಿಸುವುದಾಗಿ ತಿಳಿಸಿದರು.

ಮಾಜಿ ಶಾಸಕ ಬಿ.ಸುರೇಶ್‌ಗೌಡ ಮಾತನಾಡಿ, ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಒಡೆದ ಮನೆಯಾಗಿದೆ,ಬೇರೆ ಪಕ್ಷಗಳಿಂದ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ, ಬಿಜೆಪಿ ೧೧ ಕ್ಷೇತ್ರಗಳಲ್ಲಿಯೂ ಗೆಲ್ಲುವ ವಾತಾವರಣವಿದೆ ಬಿಜೆಪಿಗೆ ದೊಡ್ಡ ಶಕ್ತಿ ಇದೆ ಎಂದು ಹೇಳಿದರು.

ಮಾಜಿ ಸಂಸದ ಜಿ.ಎಸ್.ಬಸವರಾಜು ಮಾತನಾಡಿ,ಪಕ್ಷಕ್ಕೆ ಸೇರ್ಪಡೆಯಾಗಿರುವವರನ್ನು ಗೌರವಯುತವಾಗಿ ನಡೆಸಿಕೊಳ್ಳು ತ್ತೇನೆ,ಸಕಾಲದಲ್ಲಿ ಪಕ್ಷ ಸೇರಿ ಶಕ್ತಿ ತುಂಬಿದ್ದೀರಿ, ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಪಕ್ಷ ಕಟ್ಟಲು ಮುಂದಾಗೋಣ ಎಂದು ಹೇಳಿದರು.

ಇದೇ ವೇಳೆ ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷ ಆರ್.ದೇವರಾಜು,ಡಿಪೋ ನಾಗರಾಜು, ಕೇಸರಿ ಶ್ರೀನಿವಾಸ್, ಲೀಲಾವತಿ, ನಟರಾಜು, ಕುಬೇರ್ ಭೂ?ಣ್, ಸದಾರಾಂ, ಅರುಣ್‌ಗೌಡ, ಸೇರಿದಂತೆ ಇತರರು ಬಿಜೆಪಿ ಸೇರ್ಪಡೆಯಾದರು.

ಈ ವೇಳೆ ಟೂಡಾ ಮಾಜಿ ಅಧ್ಯಕ್ಷ ಬಾವಿಕಟ್ಟೆ ನಾಗಣ್ಣ,ನರಸಿಂಹಮೂರ್ತಿ, ಪಂಚೆ ರಾಮಚಂದ್ರಪ್ಪ, ಹನುಮಂತರಾಜು, ಸಂದೀಪ್ ಗೌಡ, ರುದ್ರೇಶ್, ಕೆಂಪರಾಜು, ಜಯಂತ್ ಗೌಡ, ಬಳ್ಳಗೆರೆ ವೆಂಕಟೇಶ್ ಸೇರಿದಂತೆ ಇತರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು