ತುಮಕೂರು: ರಾಜ್ಯ ಹೆದ್ದಾರಿ 33ರ ಟಿ.ಎಂ.ರಸ್ತೆಯ ದೊಡ್ಡಮಳಲವಾಡಿ ಬಳಿ ಸಿಮೆಂಟ್ ತುಂಬಿದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಮೃತರನ್ನು ತುಮಕೂರಿನ ಶಿರಾ ಗೇಟ್ ನಿವಾಸಿ ರಂಗನಾಥ್ (23) ಎಂದು ಗುರುತಿಸಲಾಗಿದೆ. ಮೂಲತಃ ಬಡಗಿಯಾಗಿ ಕೆಲಸ ಮಾಡುತ್ತಿದ್ದ ರಂಗನಾಥ್ ಮತ್ತು ಆತನ ಸ್ನೇಹಿತ ಬೆಂಗಳೂರಿನ ವಾಸೀಂ ಕುಣಿಗಲ್ ಗೆ ಬಂದು ದ್ವಿಚಕ್ರ ವಾಹನದಲ್ಲಿ ತಮ್ಮ ಹುಟ್ಟೂರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.
ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.