ತುಮಕೂರು: ಕುಡಿಯುವ ನೀರಿನ ವಿಚಾರದಲ್ಲಿ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದರು. ಇನ್ನು ಬೆಸ್ಕಾಂ ಇಲಾಖೆ ಕೊರಟಗೆರೆಯಲ್ಲಿ ಮಾತ್ರ ಏಕೆ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಶ್ನಿಸಿದ ಅವರು, ಶುದ್ಧ ಕುಡಿಯುವ ನೀರಿನ ಕೊರತೆಯಿಂದ ಬಡವರ ಆರೋಗ್ಯಕ್ಕೆ ತೊಂದರೆಯಾದರೆ ರಾಜ್ಯ ಸರಕಾರವೇ ಹೊಣೆ ಎಂದು ಎಚ್ಚರಿಸಿದರು.
ಸೋಮವಾರ ಕೊರಟಗೆರೆ ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಬೂತ್ ಕಮಿಟಿ ಸದಸ್ಯರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಡವರಿಂದ ಸಂಗ್ರಹಿಸಿದ ಕುಡಿಯುವ ನೀರಿನ ಹಣ ಎಲ್ಲಿ ಹೋಯಿತು’ ಎಂದು ಆರೋಪಿಸಿದರು. ಕುಡಿಯುವ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ. ಗುತ್ತಿಗೆದಾರರು ವಸೂಲಿ ಮಾಡಿರುವ ಹಣದ ಬಗ್ಗೆ ಸರಕಾರ ತನಿಖೆ ನಡೆಸಲಿ ಎಂದು ಪ್ರತಿಪಾದಿಸಿದರು.
ಬೆಸ್ಕಾಂ ಇಲಾಖೆ ಕೂಡಲೇ ನೀರಿನ ಘಟಕಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಮೀಸಲಾತಿ ಹೆಚ್ಚಿಸುವ ರಾಜ್ಯ ಸರ್ಕಾರದ ಆದೇಶವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಲೋಕಸಭೆಯ ಬೆನ್ನಲ್ಲೇ ಬಿಜೆಪಿಯ ಕೇಂದ್ರ ಸರ್ಕಾರದ ಸಚಿವರು ಮೀಸಲಾತಿ ಹೆಚ್ಚಳ ತಿರಸ್ಕರಿಸಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯ ಸರ್ಕಾರವು ಮೀಸಲಾತಿಯನ್ನು ಸಾಂವಿಧಾನಿಕವಾಗಿ ಮಾಡದೆ ರಾಜಕೀಯ ಪ್ರೇರಿತವಾಗಿ ಮಾಡಿಲ್ಲ ಎಂದು ಅವರು ಹೇಳಿದರು.