ತುಮಕೂರು: ತಾನು ಮಾಡಿದ ತಪ್ಪನ್ನು ಮತ್ತೊಬ್ಬರ ಮೇಲೆ ಹೊರಿಸುವ ಭರದಲ್ಲಿ ಬಿಜೆಪಿಯ ನಿಷ್ಠಾವಂತ ಮುಖಂಡರು ಕಾರ್ಯಕರ್ತರ ನಿಂದನೆ ಮಾಡಿರುವ ಅಭ್ಯರ್ಥಿ ದಿಲೀಪ್ ಕುಮಾರ್ ಹಾಗೂ ಅವರ ಬೆಂಬಲಿಗರ ನಡೆ ಖಂಡನೀಯ. ತೊಡೆ ಮುರಿಯುವ ಮಾತಿಗೆ ನಾವು ಸಿದ್ದ. ಸೇರಿಗೆ ಸವ್ವಾ ಸೇರು ಎಂದು ಜಿಪಂ ಮಾಜಿ ಸದಸ್ಯ ಪಿ.ಬಿ.ಚಂದ್ರಶೇಖರಬಾಬು ಸವಾಲೆಸೆದರು.
ಗುಬ್ಬಿ ಪಟ್ಟಣದ ಮಹಾಲಕ್ಷ್ಮೀ ಬಡಾವಣೆಯ ಅವರ ಗೃಹ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಅಹಿಂದ ಮತಗಳ ಕ್ರೋಡಿಕರಿಸುವ ಆಲೋಚನೆಯಲ್ಲಿ ಸಭೆ ಕರೆದರೆ ಅಭ್ಯರ್ಥಿ ಸಭೆಗೆ ಬಾರದೆ ಅವರ ಹಣಕಾಸು ನಿರ್ವಹಣೆ ಮಾಡುತ್ತಿದ್ದ ರವಿಶಂಕರ್ ಅವರಿಗೆ ಪೋನ್ ನೀಡಿ ನಮ್ಮನ್ನು ತೆಪ್ಪಗೆ ಇರಲು ಸೂಚಿಸಿದರು. ಇವೆಲ್ಲ ನೋವುಗಳ ಮಧ್ಯೆ ನಮ್ಮ ಕಾರ್ಯಕರ್ತರ ಜೊತೆ ಸೇರಿ ಪಕ್ಷದ ಕೆಲಸ ಮಾಡಿದ್ದೇವೆ. ಲೋಪ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳದೆ ನಮ್ಮಗಳ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಿದ್ದು ಸರಿಯಲ್ಲ ಎಂದು ಕಿಡಿಕಾರಿದರು.
ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಎನ್.ಸಿ.ಪ್ರಕಾಶ್ ಮಾತನಾಡಿ ಕಾರ್ಯಕರ್ತರಿಗೆ ಅಭಿನಂದನೆ ಹೆಸರಿನಲ್ಲಿ ನಮ್ಮನ್ನು ನಿಂದಿಸುವ ಕಾರ್ಯಕ್ರಮ ಮಾಡಿದ ಬಿಜೆಪಿ ಅಭ್ಯರ್ಥಿ ದಿಲೀಪ್ ಕುಮಾರ್ ಅವರು ಈ ಹಿಂದೆ ನಿಟ್ಟೂರು ಜಿಪಂ ಚುನಾವಣೆಯಲ್ಲಿ ಸಾಗರನಹಳ್ಳಿ ವಿಜಯ್ ಕುಮಾರ್ ಅವರನ್ನು ಸೋಲಿಸಲು ಮುಂದಾದ ನಿಮ್ಮಲ್ಲಿ ಪಕ್ಷ ನಿಷ್ಠೆ ಇದೆಯೇ ಎಂದು ಯೋಚಿಸಿ ಎಂದರು.
ಈ ಸಭೆಯಲ್ಲಿ ಹಿರಿಯ ಮುಖಂಡ ಎಸ್. ನಂಜೇಗೌಡ, ನರಸೇಗೌಡ, ಪಪಂ ಸದಸ್ಯರಾದ ಜಿ.ಸಿ.ಕೃಷ್ಣಮೂರ್ತಿ, ಶಶಿಕುಮಾರ್, ರೈತ ಮೋರ್ಚಾ ಅಧ್ಯಕ್ಷ ಲೋಗನಾಥ್, ಎಸ್ಸಿ ಮೋರ್ಚಾ ಅಧ್ಯಕ್ಷ ರಾಜಣ್ಣ, ಸಿ.ಎಂ.ಹಿತೇಶ್ ಸೇರಿದಂತೆ ಕ್ಷೇತ್ರದ ಪ್ರಮುಖ ಮುಖಂಡರು ಭಾಗವಹಿಸಿದ್ದರು.
ಈ ಬಾರಿ ಮುಂಗಾರು ಕೈಕೊಟ್ಟಿದ್ದರಿಂದ ಜಿಲ್ಲೆಯಲ್ಲಿ ಅಂತರ್ಜಲ ಕುಸಿದಿದ್ದು, ಬಿತ್ತನೆಯ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆಯಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ವಾಡಿಕೆಯಷ್ಟು…
'ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಬಂಧಿಸಿರುವಂತೆ ಹಾಸನದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ…
ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೃತ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಘಟನೆ ಏಪ್ರಿಲ್ 21 ರಂದು…
ಜಿಲ್ಲೆಯ ಜನ ಸ್ವತಂತ್ರರಾಗಿ ಬದುಕಬೇಕಾದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ನನಗೆ ಬೆಂಬಲಿಸಿ ಮತ ಹಾಕಬೇಕೆಂದು ಪಕ್ಷೇತರ ಅಭ್ಯರ್ಥಿ ಜೈರಾಜ ಕೆ.…
ವಕೀಲರೊಬ್ಬರ ಮೇಲೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಭಾನುವಾರ ಸಂಜೆ ಅಲ್ಮೆಲ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಮತ್ತು ಶಾಸಕ ಅಶೋಕ ಮನಗೂಳಿಯವರು ಪಾದಯಾತ್ರೆ ನಡೆಸಿ ಮತಯಾಚಿಸಿದರು.