ತುಮಕೂರು: ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಸಹೋದರರ ನಡುವಿನ ಗಲಾಟೆಯಲ್ಲಿ ಮೈದುನನಾದವನು ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದಿದ್ದಾನೆ.
ಕೊಲೆಯಾದ ಮಹಿಳೆ ತ್ರಿಶಾ (35), ಮೂಲತಃ ವಿಶಾಖಪಟ್ಟಣಂ ನಿವಾಸಿಯಾಗಿರುವ ಇವರು ತುಮಕೂರು ಜಿಲ್ಲೆಯ ಕೊರಟಗೆರೆ ಪಟ್ಟಣದಲ್ಲಿ ಟೆಂಟ್ ಹಾಕಿಕೊಂಡು ವಾಸವಾಗಿದ್ದರು. ಇಂದು ಬೆಳಗ್ಗೆ ಕ್ಷುಲ್ಲಕ ವಿಚಾರಕ್ಕೆ ಮೃತ ತ್ರಿಶಾ ಪತಿ ವಿಜಯಕುಮಾರ್ ಜೊತೆ ಗಲಾಟೆ ಮಾಡಿಕೊಂಡಿದ್ದಾನೆ. ಗಲಾಟೆ ಬಿಡಿಸಲು ಹೋದ ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಆರೋಪಿ ರಘು ಎಸ್ಕೇಪ್ ಆಗಿದ್ದ.
ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ರಘು ಅರೆಸ್ಟ್ ಆಗಿದ್ದಾನೆ.