News Karnataka Kannada
Saturday, April 27 2024
ತುಮಕೂರು

ತುಮಕೂರು: ಜೆಡಿಎಸ್‌ ನಗರ ಅಭ್ಯರ್ಥಿ ನಡವಳಿಕೆಗೆ ಬೇಸತ್ತು ರಾಜೀನಾಮೆ

Tumakuru: City candidate resigns over behaviour
Photo Credit : News Kannada

 

ತುಮಕೂರು: ನಗರ ಕ್ಷೇತ್ರದ ಅಭ್ಯರ್ಥಿ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ತಿಳಿಸಿದರು.

ಇಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಜೆಡಿಎಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ್ದೇನೆ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷಕ್ಕೆ ಚೈತನ್ಯ ತುಂಬಿದ್ದೇನೆ,ಆದರೆ ತುಮಕೂರು ಜಿಲ್ಲೆಯಲ್ಲಿ ತೇಜೋವಧೆ ಮಾಡುವ ಹುನ್ನಾರ ಮಾಡಲಾಗಿದೆ ಎಂದರು.

೨೦೧೩ರಲ್ಲಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದೆ ಆಗ ನಿರಾಕರಿಸಲಾಯಿತು,ಪಕ್ಷಕ್ಕಾಗಿ ದುಡಿಯದವರಿಗೆ ಟಿಕೆಟ್ ನೀಡಲಾಯಿತು, ಚುನಾವಣೆ ಮುಗಿದ ಮೇಲೆ ಅವರು ಹೊರಟು ಹೋದರು, ೨೦೧೮ರಲ್ಲಿಯೂ ಇದೇ ಪರಿಸ್ಥಿತಿ ಮುಂದುವರೆಯಿತು, ವರಿಷ್ಟರ ಮಾತಿಗೆ ಕಟ್ಟುಬಿದ್ದು ಪಕ್ಷಕ್ಕಾಗಿ ದುಡಿದಿದ್ದೇವೆ ಎಂದರು.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ತುಮಕೂರಿಗೆ ಬಂದರೆ ಅವರನ್ನು ನಾಮಪತ್ರ ಸಲ್ಲಿಸಲು ಕರೆಯಲಿಲ್ಲ, ಪಂಚರತ್ನ ಯಾತ್ರೆ ಆರಂಭದಲ್ಲಿ ಟಿಕೆಟ್ ಘೋಷಣೆ ಮಾಡಿದರು, ಪಕ್ಷ ಸಂಘಟನೆ ಮಾಡುವಂತೆ ಅಭ್ಯರ್ಥಿಗೆ ಮನವಿ ಮಾಡಿದರು ಸಹ, ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ತಮ್ಮ ಹಿಂಬಾಲಕರಿಗಾಗಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಯಿತು, ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯಬೇಕು ಎನ್ನುವ ಮನಸ್ಥಿತಿಯನ್ನು ಹೊಂದಿಲ್ಲದ ಅಭ್ಯರ್ಥಿಯ ನಡವಳಿಕೆಯಿಂದ ಬೇಸರಗೊಂಡು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ, ಇಂತಹ ವ್ಯಕ್ತಿಗಳೊಂದಿಗೆ ರಾಜಕಾರಣ ಮಾಡಲು ಆಗುವುದಿಲ್ಲ ಎಂದು ಹೇಳಿದರು. ಜೆಡಿಎಸ್ ಮುಖಂಡ ದೇವರಾಜು ಸಹ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿವುದಾಗಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು