Categories: ತುಮಕೂರು

ತುಮಕೂರು: ಜೆಡಿಎಸ್‌ ನಗರ ಅಭ್ಯರ್ಥಿ ನಡವಳಿಕೆಗೆ ಬೇಸತ್ತು ರಾಜೀನಾಮೆ

 

ತುಮಕೂರು: ನಗರ ಕ್ಷೇತ್ರದ ಅಭ್ಯರ್ಥಿ ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ತಿಳಿಸಿದರು.

ಇಂದು ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೨೦ ವರ್ಷಗಳಿಂದ ಜೆಡಿಎಸ್ ಪಕ್ಷವನ್ನು ಕಟ್ಟಲು ಶ್ರಮಿಸಿದ್ದೇನೆ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಪಕ್ಷಕ್ಕೆ ಚೈತನ್ಯ ತುಂಬಿದ್ದೇನೆ,ಆದರೆ ತುಮಕೂರು ಜಿಲ್ಲೆಯಲ್ಲಿ ತೇಜೋವಧೆ ಮಾಡುವ ಹುನ್ನಾರ ಮಾಡಲಾಗಿದೆ ಎಂದರು.

೨೦೧೩ರಲ್ಲಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿದೆ ಆಗ ನಿರಾಕರಿಸಲಾಯಿತು,ಪಕ್ಷಕ್ಕಾಗಿ ದುಡಿಯದವರಿಗೆ ಟಿಕೆಟ್ ನೀಡಲಾಯಿತು, ಚುನಾವಣೆ ಮುಗಿದ ಮೇಲೆ ಅವರು ಹೊರಟು ಹೋದರು, ೨೦೧೮ರಲ್ಲಿಯೂ ಇದೇ ಪರಿಸ್ಥಿತಿ ಮುಂದುವರೆಯಿತು, ವರಿಷ್ಟರ ಮಾತಿಗೆ ಕಟ್ಟುಬಿದ್ದು ಪಕ್ಷಕ್ಕಾಗಿ ದುಡಿದಿದ್ದೇವೆ ಎಂದರು.

ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲು ತುಮಕೂರಿಗೆ ಬಂದರೆ ಅವರನ್ನು ನಾಮಪತ್ರ ಸಲ್ಲಿಸಲು ಕರೆಯಲಿಲ್ಲ, ಪಂಚರತ್ನ ಯಾತ್ರೆ ಆರಂಭದಲ್ಲಿ ಟಿಕೆಟ್ ಘೋಷಣೆ ಮಾಡಿದರು, ಪಕ್ಷ ಸಂಘಟನೆ ಮಾಡುವಂತೆ ಅಭ್ಯರ್ಥಿಗೆ ಮನವಿ ಮಾಡಿದರು ಸಹ, ಕಿವಿಗೊಡಲಿಲ್ಲ ಎಂದು ಆರೋಪಿಸಿದರು.

ತಮ್ಮ ಹಿಂಬಾಲಕರಿಗಾಗಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಲಾಯಿತು, ಎಲ್ಲರನ್ನು ಒಟ್ಟಿಗೆ ಕೊಂಡೊಯ್ಯಬೇಕು ಎನ್ನುವ ಮನಸ್ಥಿತಿಯನ್ನು ಹೊಂದಿಲ್ಲದ ಅಭ್ಯರ್ಥಿಯ ನಡವಳಿಕೆಯಿಂದ ಬೇಸರಗೊಂಡು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ, ಇಂತಹ ವ್ಯಕ್ತಿಗಳೊಂದಿಗೆ ರಾಜಕಾರಣ ಮಾಡಲು ಆಗುವುದಿಲ್ಲ ಎಂದು ಹೇಳಿದರು. ಜೆಡಿಎಸ್ ಮುಖಂಡ ದೇವರಾಜು ಸಹ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿವುದಾಗಿ ಹೇಳಿದರು.

Sushma K

Recent Posts

ಆಟವಾಡ್ತಿದ್ದ ಮಗು ಅಪಹರಣ : ಮೂರೇ ದಿನದಲ್ಲಿ ಪತ್ತೆ ಹಚ್ಚಿದ ಬೀದರ್​ ಪೊಲೀಸ್

ಅಪಹರಣಕ್ಕೊಳಗಾದ ಮಗವನ್ನ ಮೂರು ದಿನದಲ್ಲಿಯೇ ಬಬೀದರ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮೇ 4 ರಂದು ಬೀದರ್​ನ ಓಲ್ಡ್ ಸಿಟಿಯ…

2 mins ago

ಕೊರೊನಾ ವ್ಯಾಕ್ಸಿನ್ ಹಿಂಪಡೆದ ಅಸ್ಟ್ರಾಜೆನೆಕಾ : ಹೆಚ್ಚಿದ ಆತಂಕ

ಕೊರೊನಾ ವ್ಯಾಕ್ಸಿನ್ ಮತ್ತು ಕೋವಶೀಲ್ಡ್‌ ಪಡೆದವರಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಳ್ಳುತ್ತವೆ ಎಂಬ ಮಾತಿಗೆ ಧಂಗಾಗಿರುವ ಜನರಿಗೆ ಇದೀಗ ಕೊರೊನಾ ವ್ಯಾಕ್ಸಿನ್ ಹಿಂಪಡೆದ…

50 mins ago

ಇಂದು ರೇವಣ್ಣ ಜಾಮೀನು ಅರ್ಜಿ ವಿಚಾರಣೆ : ಬೇಲಾ? ಜೈಲಾ? ಇಂದೇ ನಿರ್ಣಾಯಕ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ…

1 hour ago

ಪ್ರತಿಷ್ಠಿತ ಕಂಪನಿಗಳ ನಕಲು ದಂಧೆ : ಆರೋಪಿಗಳು ಸಿಬಿಐ ವಶ

ದಿನ ನಿತ್ಯ ಜನರು ಬಳಸುವ ವಸ್ತುಗಳನ್ನೇ ಟಾರ್ಗೆಟ್ ಮಾಡಿಕೊಂಡ ಗ್ಯಾಂಗ್​ವೊಂದು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಜೊತೆಗೆ…

2 hours ago

ಇಂದು ಬಿರುಗಾಳಿ ಸಹಿತ ಮಳೆ ಸಾಧ್ಯತೆ : ಹವಮಾನ ಇಲಾಖೆ ಎಚ್ಚರ

ದೇಶಾದ್ಯಂತ ಬಿರು ಬಿಸಿಲಿನ ಬೇಗೆಯಲ್ಲಿ ಬೆಂದ ಜನರಿಗೆ ಇದು ಸಿಹಿ ಸುದ್ದಿ ಆದರೆ ಎಚ್ಚರಿಕೆ ವಹಿಸುವುದು ಅಗತ್ಯ.ದೇಶದ ಹಲವು ರಾಜ್ಯಗಳಲ್ಲಿ…

2 hours ago

ಮತದಾರರು ಮತ್ತು ಜಿಲ್ಲಾಡಳಿತಕ್ಕೆ ಆಲಗೂರ್ ಅಭಿನಂದನೆ

ಜಿಲ್ಲೆಯಲ್ಲಿ ಮಂಗಳವಾರ ನಡೆದ ಲೋಕಸಭಾ ಚುನಾವಣೆ ಶಿಸ್ತು ಮತ್ತು ಶಾಂತಿ-ಸುವ್ಯವಸ್ಥೆಯಿಂದ ಕೂಡಿದ್ದಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು ಸಂತಸ…

2 hours ago