News Karnataka Kannada
Wednesday, May 01 2024
ತುಮಕೂರು

ತುಮಕೂರು: ಸಾರ್ವಕರ್ ಫ್ಲೆಕ್ಸ್ ಹರಿದವರ ವಿರುದ್ಧ ಕ್ರಮಕ್ಕೆ ದೂರು

Tumakuru: Complaint filed for action against sarvakar flux victims
Photo Credit : By Author

ತುಮಕೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ನಿಮಿತ್ತ ಹಾಕಿದ್ದ ವೀರ ಸಾರ್ವಕರ್  ಫ್ಲೆಕ್ಸ್  ಹರಿದು ಹಾಕಿರುವ ದುಷ್ಕರ್ಮಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತುಮಕೂರು ನಗರದ ಎಸ್.ಪಿ ಕಛೇರಿಗೆ ತೆರಳಿ ಎಸ್.ಪಿ ರಾಹುಲ್ ಕುಮಾರ್ ರವರಿಗೆ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜೋತಿಗಣೇಶ್ ದೂರು ಸಲ್ಲಿಸಿದ್ದಾರೆ.

ಭಾರತದ 75ನೇ ಸ್ವಾತಂತ್ರ ದಿನ ಅಮೃತಮಹೋತ್ಸವದ ಅಂಗವಾಗಿ ನಗರದಾದ್ಯಂತ 85 ಜನ ಸ್ವಾತಂತ್ರ್ಯಹೋರಾಟಗಾರರ ಸಣ್ಣ ಮಾಹಿತಿಯನ್ನು ಒಳಗೊಂಡ ಭಾವಚಿತ್ರದ ಫ್ಲೆಕ್ಸ್ ಹಾಕಲಾಗಿತ್ತು. ಅಪ್ರತಿಮ ಹೋರಾಟಗಾರರಾದ ವೀರ ಸಾರ್ವಕರ್ ಅವರ ಪೋಟೋವನ್ನು ಕಿತ್ತು ಹಾಕುವ ಮೂಲಕ ಅವಮಾನಿಸಲಾಗಿದೆ. ಇದು ರಾಷ್ಟ್ರವಿರೋಧಿ ಕೃತ್ಯವಾಗಿದೆ. ನಾಡಿನ ಜನರಿಗೆ ಅಪಮಾನ ಮಾಡಿದಂತಾಗಿದ್ದು, ಜನರ ಭಾವನೆಗಳಿಗೆ ನೋವುಂಟು ಮಾಡಿದೆ. ಆದ್ದರಿಂದ ಈ ಕೃತ್ಯವೆಸಗಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆ ಹಚ್ಚಿ ಸೂಕ್ತ ಕ್ರಮ ಜರುಗಿಸಬೇಕೆಂದು ಎಸ್.ಪಿ.ರಾಹುಲ್ ಕುಮಾರ್ ಅವರಿಗೆ ದೂರು ಸಲ್ಲಿಸಿದರು.

ಈ ವೇಳೆ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಹೆಬ್ಬಾಕ, ನಗರಾಧ್ಯಕ್ಷ ಹನುಮಂತರಾಜು,ಪಾಲಿಕೆ ಸದಸ್ಯರಾದ ಮಲ್ಲಿಕಾರ್ಜುನ್, ಮಂಜುನಾಥ್, ಮುಖಂಡರಾದ ಇಂದ್ರಕುಮಾರ್, ಮಹೇಶಬಾಬು, ಯುವಮೋರ್ಚಾ ಅಧ್ಯಕ್ಷ ಯಶಸ್ಸು, ವಿನಯ್, ರುದ್ರೇಶ್ ಮತ್ತಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು