ತುಮಕೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಧಿಕಾರಿಗಳನ್ನೊಳಗೊಂಡ ಯಾವುದೇ ಸಭೆ ನಡೆಸಿಲ್ಲ. ಈ ನಿಟ್ಟಿನಲ್ಲಿ ರಾಜ್ಯಪಾಲರಿಗಾದರೂ ದೂರು ಕೊಡಲಿ ಇನ್ಯಾರಿಗಾದರು ಕೊಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್ ಕೊಟ್ಟರು.
ಪಾವಗಡ ಸೋಲಾರ್ ಪಾರ್ಕ್ ವೀಕ್ಷಣೆ ಬಳಿಕ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಸಿಟಿ ರೌಂಡ್ಸ್ನಲ್ಲಿ ಇದ್ದೆ ನನ್ನನ್ನು ಕರೆದುಕೊಂಡು ಹೋಗಲು ಅಧಿಕಾರಿಗಳು ಬಂದಿದ್ದರು. ಈ ವೇಳೆ ನಾನು ಸುರ್ಜೇವಾಲಾ ಇಬ್ಬರು ಕಾಫಿ ಕುಡಿಯಲು ಕುಳಿತು ಕೊಂಡಿದ್ದೆವು. ಅದನ್ನು ಬಿಟ್ಟರೆ ಯಾವ ಆಫೀಸರ್ಗೂ ಸುರ್ಜೇವಾಲಾಗೂ ಸಂಬಂಧವಿಲ್ಲ. ನಾವುಂಟು ಸುರ್ಜೇವಾಲ ಉಂಟು, ಹೋಟೆಲ್ ಉಂಟು, ಕಾಫಿ ಉಂಟು. ಯಾರು ಮೀಟಿಂಗ್ ಕರೆದಿಲ್ಲ, ಯಾವ ಮೀಟಿಂಗ್ ಮಾಡಿಲ್ಲ ಎಂದರು.
ರಾಜ್ಯಪಾಲರಿಗೆ ಬೇಕಾದ ದೂರು ಕೊಡಲಿ, ಇನ್ಯಾರಿಗೆ ಬೇಕಾದರೂ ದೂರು ಕೊಡಲಿ. ಇಂತಹ ಸಭೆಗಳನ್ನು ಬಿಜೆಪಿಯವರು ಎಷ್ಟು ಮಾಡಿದ್ದಾರೆ ಅನ್ನುವ ಪಟ್ಟಿ ಇದೆ. ಪಾಪ ಜಮೀರ್ ಅಹ್ಮದ್ ಫೋಟೋ ಹಾಕಿಕೊಂಡು ಒಂದು ಸಭೆ ಮಾಡಿದ್ದೀನಿ ಅಂತ ಹೇಳಿಕೊಂಡಿದ್ದು ಹಾಗಾಗಿ ಫೋಟೋ ಲೀಕ್ ಆಗಿದೆ ಎಂದು ಸಮರ್ಥಿಸಿಕೊಂಡರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…