ತುಮಕೂರು

ತುಮಕೂರು ಚುನಾವಣಾ ಅಕ್ರಮ: 81.33ಲಕ್ಷ ರೂ. ನಗದು ಜಪ್ತಿ

ತುಮಕೂರು: ಕರ್ನಾಟಕ ವಿಧಾನಸಭಾ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ದಿನ ಅಂದರೆ ಮಾರ್ಚ್ 29 ರಿಂದ ಏಪ್ರಿಲ್ 11 ರವರೆಗೆ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಯಡಿ 81.33ಲಕ್ಷ ರೂ. ನಗದನ್ನು ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಪಾರದರ್ಶಕ ಚುನಾವಣೆ ನಡೆಸುವ ನಿಟ್ಟಿನಲ್ಲಿ ಚುನಾವಣಾ ಅಕ್ರಮವನ್ನು ತಡೆಯಲು 156 ವಿಚಕ್ಷಣ ದಳ(ಎಫ್ಎಸ್ಟಿ-ಫ್ಲೈಯಿಂಗ್ ಸ್ವ್ಯಾಡ್) 135 ಸ್ಥಿರ ಕಣ್ಗಾವಲು ತಂಡ (ಎಸ್ಎಸ್ಟಿ-ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡ) ಹಾಗೂ 9 ಅಬಕಾರಿ ತಂಡವನ್ನು ರಚಿಸಿ ನಿಯೋಜಿಸಲಾಗಿದೆ.

ಜಿಲ್ಲಾದ್ಯಂತ ನಿಯೋಜಿತ ತಂಡಗಳು ಮಾರ್ಚ್ 29 ರಿಂದ ಏಪ್ರಿಲ್ 11 ರವರೆಗೆ ಪೊಲೀಸರ ಸಹಕಾರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಎಸ್ಎಸ್ಟಿ ತಂಡದಿಂದ 5.18 ಲಕ್ಷ ರೂ. ಹಾಗೂ ಪೊಲೀಸ್ ಇಲಾಖೆಯಿಂದ 76.25ಲಕ್ಷ ರೂ. ಸೇರಿ 82.33 ಲಕ್ಷ ರೂ.ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ ದಾಖಲೆಯಿಲ್ಲದ 75 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಸೂಕ್ತ ದಾಖಲೆ ಒದಗಿಸಿದವರಿಗೆ 3.70 ಲಕ್ಷ ರೂ. ಹಣವನ್ನು ಹಿಂದಿರುಗಿಸಲಾಗಿದೆ.

ಉಳಿದ 2.63 ಲಕ್ಷ ರೂ. ಹಣವನ್ನು ಜಿಲ್ಲಾ ಖಜಾನೆಗೆ ಜಮೆ ಮಾಡಲಾಗಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ಜಮೆಯಾಗಿರುವ 75 ಲಕ್ಷ ರೂ. ಹಣಕ್ಕೆ ಸಮರ್ಪಕ ದಾಖಲೆ ಒದಗಿಸಿದ ನಂತರ ಸಂಬಂಧಿಸಿದವರಿಗೆ ಹಿಂದಿರುಗಿಸಲಾಗುವುದು.

ಅದೇ ರೀತಿ ಮಾರ್ಚ್ 29 ರಿಂದ ಏಪ್ರಿಲ್ 11 ರವರೆಗೆ ಅಬಕಾರಿ ಇಲಾಖೆ, ಫ್ಲೈಯಿಂಗ್ ಸ್ಕ್ವಾಡ್ ತಂಡ ಹಾಗೂ ಪೊಲೀಸ್ ತಂಡದಿಂದ ಜಿಲ್ಲೆಯಲ್ಲಿ 89,92,641 ರೂ. ಮೌಲ್ಯದ ದಾಖಲೆಯಿಲ್ಲದ 16804.53 ಲೀ. ಭಾರತೀಯ ತಯಾರಿಕಾ ಮದ್ಯ (IML-Indian made liquor), 16371.01 ಲೀ. ಬೀರ್ ಹಾಗೂ 5೦ಲೀ. ಸೇಂದಿಯನ್ನು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ಅಕ್ರಮಗಳಿಗಾಗಿ ಬಳಸಿಕೊಂಡಿದ್ದ 5೦ ದ್ವಿಚಕ್ರ ವಾಹನ, 2 ನಾಲ್ಕು ಚಕ್ರ ವಾಹನ, ಮತದಾರರಿಗೆ ಹಂಚಿಕೆ ಮಾಡಲು ಸಂಗ್ರಹಿಸಿಟ್ಟಿದ್ದ ವಸ್ತು, ದವಸ-ಧಾನ್ಯ, ಉಡುಪುಗಳನ್ನು ವಶಪಡಿಸಿಕೊಳ್ಳಲಾಗಿದ್ದು, 6301212 ರೂ. ಮೌಲ್ಯದ 720 ಎಲ್ಇಡಿ ಬಲ್ಬ್, 9 ಬ್ಯಾಗ್ನಲ್ಲಿದ್ದ 137 ಚೂಡಿದಾರ್ ಪೀಸ್, 2 ಬ್ಯಾಗ್ನಲ್ಲಿದ್ದ 13 ಲೆಹಂಗಾ ಪೀಸ್, 1 ಬ್ಯಾಗ್ನಲ್ಲಿದ್ದ 25 ಬುರ್ಖಾ ಪೀಸ್, 1 ಬ್ಯಾಗ್ನಲ್ಲಿದ್ದ 16 ಲಾಂಗ್ ಫ್ರಾಕ್ಸ್, 54 ಬಾಕ್ಸ್ ಡಿನ್ನರ್ ಸೆಟ್, ತಲಾ 77 ಕೆ.ಜಿ. 4೦೦ ಭತ್ತದ ಚೀಲ, 2235 ಕೆ.ಜಿ. ಅಲ್ಯುಮಿನಿಯಂ ಮತ್ತು ಸ್ಟೀಲ್ ಪಾತ್ರೆ, 1೦೦ ನೈಟಿ, 2321 ಸೀರೆ, 301 ಚೂಡಿದಾರ್ ಟಾಪ್ಸ್, 68 ಲೆಗ್ಗಿನ್ಸ್, ತಲಾ 6೦ ಕೆ.ಜಿ. 2೦ ಜೋಳದ ಚೀಲ, PÉJ-06-J©-5828 ಕ್ಯಾಂಟರ್ ಲಾರಿ, 257 ಚುನಾವಣಾ ಕರಪತ್ರ, ಮಂಜುನಾಥ ಸ್ವಾಮಿ ಭಾವಚಿತ್ರ ಮತ್ತು ಬಳೆಗಳ ಪೊಟ್ಟಣ, ತಲಾ 26 ಕೆ.ಜಿ.ಯ 6೦ ಚೀಲ ಅಕ್ಕಿ, 2500-3೦೦೦ ಜೆ.ಡಿ.ಎಸ್. ಪಕ್ಷದ ಪಾಂಪ್ಲೇಟ್, 380 ಅಕ್ಕಿಯ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದೆ.

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಡಿ ದಾಖಲಾದ ಪ್ರಕರಣಗಳಲ್ಲಿ ಒಟ್ಟು 27 ಹಾಗೂ ಅಬಕಾರಿ ಕಾಯ್ದೆಯನ್ನು ಉಲ್ಲಂಘಿಸಿದ 249 ಪ್ರಕರಣಗಳಿಗೆ ಪ್ರಥಮ ವರ್ತಮಾನ ವರದಿ(ಎಫ್ಐಆರ್) ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Sneha Gowda

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

12 mins ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

18 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

33 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

49 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago