ತುಮಕೂರು: ಬಸಣ್ಣನವರು ಜಗತ್ತಿಗೆ ಅಮೂಲ್ಯವಾದ ಕೊಡುಗೆ ನೀಡಿದ್ದಾರೆ ಅವರ ಪ್ರತಿಯೊಂದು ವಾಕ್ಯ ನಮಗೆಲ್ಲಾ ದಾರಿದೀಪ ಎಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ತಿಳಿಸಿದರು.
ಕೊರಟಗೆರೆ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಲಾದ ಸುದ್ದಿಗೋಷ್ಠಿಗೆ ಮುಂಚಿತವಾಗಿ ಬಸವಣ್ಣ ಜಯಂತಿ ಪ್ರಯುಕ್ತ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡಿ ನಂತರ ಮಾತನಾಡಿದ ಅವರು, ನಮ್ಮ ಪಕ್ಷದ ಪಂಚರತ್ನ ಮಹತ್ವ ಯೋಜನೆಯ ಬಗ್ಗೆ ಜನರಿಗೆ ತಿಳಿಸಲು ಪಕ್ಷದ ವತಿಯಿಂದ ನಾಳೆ ಮಧ್ಯಾಹ್ನ 3 ಗಂಟೆಗೆ ಹೊಳವನಹಳ್ಳಿ ಗ್ರಾಮದಲ್ಲಿ ಸಭೆಯನ್ನು ಆಯೋಜಿಸಿದ್ದು, ಈ ಸಭೆಗೆ ಮುಖ್ಯ ಅತಿಥಿಗಳಾಗಿ ಮಣ್ಣಿನ ಮಗ ಮಾಜಿ ಪ್ರಧಾನಿ ದೇವಗೌಡ ಅಪ್ಪಾಜಿ ಅವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ ಆಗಮಿಸಲಿದ್ದು, ಹೆಚ್ಚಿನ ಸಂಖೈಯಲ್ಲಿ ಕಾರ್ಯಕರ್ತರು, ಮುಖಂಡರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಮೇ 10 ರಂದು ನೆಡೆಯಲಿರುವ ವಿಧಾನ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗಲಿದೆ. ಮತ್ತೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ,ಕೊರಟಗೆರೆಯಲ್ಲಿಯೂ ಕೂಡ ಜೆಡಿಎಸ್ ಪಕ್ಚದಿಂದ ಸ್ಪರ್ಧಿಸಿರುವ ನಾನು ಅತೀ ಹೆಚ್ಚು ಮತಗಳಿಂದ ಗೆಲುವು ಸಾಧಿಸುತ್ತೇನೆ ಎಂದು ನುಡಿದರು.