ತುಮಕೂರು: ತುಮಕೂರು ಗ್ರಾಮಾಂತರದ ದೊಡ್ಡ ನಾರವಂಗಲ ಗ್ರಾಮ ಪಂಚಾಯಿತಿಯಲ್ಲಿ ಆರೋಗ್ಯ ಅಮೃತ ಅಭಿಯಾನ ಯೋಜನೆ ಅಡಿಯಲ್ಲಿ ಮಹಾತ್ಮ ಗಾಂಧಿ ರಾಷ್ಷ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕೂಲಿ ಕಾರ್ಮಿಕರ ಹಾಗೂ ಆಶ್ರಮ ಗುರುತಿನ ಚೀಟಿ ಹೊಂದಿರುವ ಫಲಾನುಭವಿಗಳ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿಕುಮಾರ್, ಕಾರ್ಯದರ್ಶಿ ಅಶೋಕ್, ಆರೋಗ್ಯ ಇಲಾಖೆಯ ಅಧಿಕಾರಿಗಳು,ಸಾರ್ವಜನಿಕರು ಹಾಜರಿದ್ದರು. ಕೂಲಿ ಕಾರ್ಮಿಕರು ಆರೋಗ್ಯ ಶಿಬಿರದ ಯೋಜನೆಯ ಉಪಯೋಗ ಪಡೆದುಕೊಂಡರು.