ತುಮಕೂರು: ಸರಕಾರದ ಶಕ್ತಿ ಯೋಜನೆ ಚಾಲನೆಯನ್ನು ಇಂದು ತುಮಕೂರಿನ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಚಾಲನೆ ನೀಡಿದರು.
ಸರಕಾರದ ಮಹತ್ವದ ಯೋಜನೆಯಾದ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಘೋಷಿಸಿಲಾಗಿದ್ದು, ರಾಜ್ಯಾದ್ಯಂತ ಶಕ್ತಿ ಯೋಜೆನೆಗೆ ಚಾಲನೆ ನೀಡಲಾಗಿದೆ. ತುಮಕೂರಿನಲ್ಲಿ ಡಾ.ಜಿ ಪರಮೇಶ್ವರ್ ಅವರು ಕಂಡಕ್ಟರ್ ಆಗುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಪ್ರಭಾರ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಮುಂತಾದವರು ಭಾಗವಹಿಸಿದ್ದರು.