ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ನ ಈ ಸುನಾಮಿ ಅಲೆಯಲ್ಲಿ ಎಲ್ಲಾ ಪಕ್ಷಗಳು ಕೊಚ್ಚಿಹೋಗಲಿವೆ ಎಂದು ಅವರು ಹೇಳಿದರು.
ನಗರದ ಸಿದ್ದಗಂಗಾ ಮಠದಲ್ಲಿ ಪಂಚರತ್ನ ರಥಯಾತ್ರೆಗೆ ಆಗಮಿಸಿದ ಅವರು ಲಿಂಗೈಕ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯಲ್ಲಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದ ಜನತೆ ಈಗಾಗಲೇ ಜೆಡಿಎಸ್ ಗೆ ಬಹುಮತ ನೀಡಲು ನಿರ್ಧರಿಸಿದ್ದಾರೆ. ರಾಜಕೀಯ ಗಾಳಿ ಗೊತ್ತಿಲ್ಲದವರು ಕೂಡ ಕುಮಾರಣ್ಣನ ಬಗ್ಗೆ ಹೇಳುತ್ತಿದ್ದಾರೆ, ಅವರು ಸಿಎಂ ಆಗುತ್ತಾರೆ ಎಂದು ಹೇಳಿದರು.
ಕಾರ್ಯಕ್ರಮದ ಮೊದಲ ಹಂತವನ್ನು ರಾಜ್ಯದ 36 ವಿಧಾನಸಭಾ ಕ್ಷೇತ್ರಗಳಿಗೆ ನಿಗದಿಪಡಿಸಲಾಗಿದೆ. ಎರಡನೇ ಹಂತದ ರಥಯಾತ್ರೆ ಜನವರಿ 3 ರಿಂದ ಕಲಬುರಗಿ, ಬೀದರ್, ರಾಯಚೂರು, ವಿಜಯಪುರ ಮತ್ತು ಕಲ್ಯಾಣ ಕರ್ನಾಟಕದ ಇತರ ಭಾಗಗಳಲ್ಲಿ ನಡೆಯಲಿದೆ.