Categories: ತುಮಕೂರು

ತುಮಕೂರು: ಹಿಂದುಳಿದ ತಾಲೂಕುಗಳಲ್ಲಿ ಟೋಲ್ ಪಡೆಯದಂತೆ ಕೆಎನ್‌ಆರ್ ಒತ್ತಾಯ

ತುಮಕೂರು: ಜಿಲ್ಲೆಯಲ್ಲಿ ನಂಜುಂಡಪ್ಪ ವರದಿ ಪ್ರಕಾರ ಅತಿ ಹಿಂದುಳಿದಿರುವ ತಾಲ್ಲೂಕುಗಳಾಗಿರುವ ಕೊರಟಗೆರೆ, ಮಧುಗಿರಿ ಹಾಗೂ ಪಾವಗಡ ತಾಲ್ಲೂಕಿನ ಜನರು ಸಂಚರಿಸುವ ರಾಜ್ಯ ಹೆದ್ದಾರಿಯಲ್ಲಿ ಸ್ಥಾಪಿಸಲಾಗಿರುವ ಟೋಲ್‌ನಲ್ಲಿ ಸರ್ವೀಸ್ ರಸ್ತೆ ನಿರ್ಮಿಸದೆ ಶುಲ್ಕ ವಸೂಲಿ ಮಾಡಬಾರದು ಎಂದು ಮಧುಗಿರಿ ಶಾಸಕ ಕೆ.ಎನ್. ರಾಜಣ್ಣ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರಟಗೆರೆ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಎರಡು ಟೋಲ್‌ಗಳನ್ನು ಸ್ಥಾಪಿಸಲಾಗಿದೆ. ಈ ಟೋಲ್‌ಗಳಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿರುವುದರಿಂದ ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ತಾಲ್ಲೂಕಿನ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮಧುಗಿರಿ, ಕೊರಟಗೆರೆ ಹಾಗೂ ಪಾವಗಡ ಈ ಮೂರು ತಾಲ್ಲೂಕುಗಳು ನಂಜುಂಡಪ್ಪ ವರದಿಯಲ್ಲಿ ಅತಿ ಹಿಂದುಳಿದ ತಾಲ್ಲೂಕು ಎಂದು ನಮೂದಾಗಿದೆ. ಸರ್ಕಾರ ಟೋಲ್ ಹಾಕುವುದಾದರೆ ಪಕ್ಕದಲ್ಲಿ ಸರ್ವೀಸ್ ರಸ್ತೆ ನಿರ್ಮಿಸಿ ಟೋಲ್ ಸ್ಥಾಪಿಸಬೇಕಾಗಿತ್ತು. ನಾವು ಓಡಾಡುವ ರಸ್ತೆಯಲ್ಲಿ ನಮಗೆ ಉಚಿತವಾಗಿ ಓಡಾಡುವ ಅವಕಾಶ ಇದ್ದೇ ಇರುತ್ತದೆ. ಸರ್ವೀಸ್ ರಸ್ತೆ ಮಾಡದೆ ಟೋಲ್ ಹಾಕಿರುವುದರಿಂದ ಈ ಭಾಗದ ಜನರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದರೆ ಟೋಲ್ ತೆಗೆಸುತ್ತೇವೆ ಎಂದು ಜನರಿಗೆ ನಾನು, ಡಾ. ಜಿ. ಪರಮೇಶ್ವರ್ ಹಾಗೂ ವೆಂಕಟೇಶ್ ಅವರು ಮನವಿ ಮಾಡಿದ್ದೇವು. ಮೇ ೩೦ಕ್ಕೆ ಈ ಟೋಲ್‌ನಲ್ಲಿ ಹಣ ವಸೂಲಿ ಮಾಡುವ ಗುತ್ತಿಗೆ ಅವಧಿ ಮುಗಿಯುತ್ತಿದೆ. ಹಾಗಾಗಿ ಜೂನ್ ೧ ರಿಂದ ಮತ್ತೆ ಈ ಟೋಲ್‌ಗಳ ಗುತ್ತಿಗೆ ಅವಧಿಯನ್ನು ನವೀಕರಿಸಿ ಶುಲ್ಕ ವಸೂಲಿ ಮಾಡಬಾರದು ಎಂಬುದು ನಾನೂ ಸೇರಿದಂತೆ ಡಾ. ಜಿ. ಪರಮೇಶ್ವರ್, ವೆಂಕಟೇಶ್ ಅವರ ಒತ್ತಾಯವಾಗಿದೆ ಎಂದಿದ್ದಾರೆ.

ಒಂದು ವೇಳೆ ಟೋಲ್ ಹಾಕುವುದಾದರೆ ಸರ್ವೀಸ್ ರಸ್ತೆ ಮಾಡಿ ಹಾಕಿಕೊಳ್ಳಲಿ. ಇದಕ್ಕೆ ನಮ್ಮ ಅಡ್ಡಿಯಿಲ್ಲ. ಸರ್ವೀಸ್ ರಸ್ತೆ ನಿರ್ಮಿಸದೇ ಟೋಲ್ ಹಣ ವಸೂಲಿ ಮಾಡುವುದು ಅವೈಜ್ಞಾನಿಕ. ಹಾಗಾಗಿ ಜೂ. ೧ ರಿಂದ ಟೋಲ್‌ನಲ್ಲಿ ವಾಹನ ಸವಾರರಿಂದ ಹಣ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಜನರ ಭಾವನೆಗಳಿಗೆ ಸ್ಪಂದಿಸದೆ ವ್ಯತಿರಿಕ್ತವಾಗಿ ನಡೆದರೆ ಅದಕ್ಕೆ ಜನರು ಅವರದೇ ಆದ ರೀತಿಯಲ್ಲಿ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ. ಇದಕ್ಕೆ ನಾವ್ಯಾರು ಕಾರಣರಾಗುವುದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂದಿರುವ ಶಾಸಕ ಕೆ.ಎನ್. ರಾಜಣ್ಣ ಅವರು, ಜೂ. ೧ ರಿಂದ ಟೋಲ್ ಹಣವನ್ನು ಜನರಿಂದ ಪಾವತಿ ಮಾಡಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.

Ashika S

Recent Posts

ದಲಿತ ಯುವತಿಯ ಮೇಲೆ ಅನ್ಯಕೋಮಿನ ಯುವಕ ಅತ್ಯಾಚಾರ : ಆರೋಪಿ ಪೊಲೀಸರ ವಶಕ್ಕೆ

ಹುಬ್ಬಳ್ಳಿಯಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್…

2 mins ago

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

17 mins ago

ಸಿಡಿಲು ಬಡಿದು 10 ದಿನದ ಹಿಂದೆ ಮದುವೆಯಾಗಿದ್ದ ಯುವಕ ಮೃತ್ಯು

ಹತ್ತು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ…

33 mins ago

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

8 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

9 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

9 hours ago