ತುಮಕೂರು: ತುಮಕೂರಿನಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ನಡೆಸಿದ್ದು, ಕೊರಟಗೆರೆ ತಾಲೂಕಿನ ಇರಕ ಸಂದ್ರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಬಾಲಕರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಕೆಲವು ವಾರಗಳಿಂದ ಕರ್ನಾಟಕದ ವಿವಿಧೆಡೆ ಚಿರತೆ ದಾಳಿಗಳು ನಡೆಯುತ್ತಿರವುದು ಪರಿಸರವಾದಿಗಳು ಮತ್ತು ವನ್ಯಜೀವಿ ತಜ್ಞರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಈ ತಿಂಗಳ ಆರಂಭದಲ್ಲಿ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಬ್ಬೆಗುಂಡಿ ಗ್ರಾಮದ ತನ್ನ ಮನೆಯಲ್ಲಿ ಗುರುವಾರ 22 ವರ್ಷದ ಮಹಿಳೆಯನ್ನು ಹತ್ಯೆ ಮಾಡಲಾಗಿತ್ತು.
ಬೆಂಗಳೂರಿನ ಹೊರ ಭಾಗಗಳಲ್ಲೂ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ. ಚಿರತೆಗಳು ಓಡಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಐಟಿಸಿ ಕಾರ್ಖಾನೆ ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಹಿಡಿಯಲು ಬೆಂಗಳೂರಿನ ಚಿಕ್ಕಜಾಲದಲ್ಲಿ ಎರಡು ಬೋನ್ಗಳನ್ನು ಸಿದ್ಧಪಡಿಸಲಾಗಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.