News Karnataka Kannada
Thursday, May 02 2024
ತುಮಕೂರು

ತುಮಕೂರು: ಕಮಿಷನ್ ಆರೋಪ, ತನಿಖೆಗೆ ಲೋಕಾಯುಕ್ತಕ್ಕೆ ದೂರು

Lokayukta files complaint against Lokayukta over commission's allegations
Photo Credit : News Kannada

ತುಮಕೂರು: ಖಾಸಗಿ ವಾಹಿನಿಯೊಂದು ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಮಧುಗಿರಿ ಕ್ಷೇತ್ರದ ಶಾಸಕರಾದ ಎಂ.ವಿ.ವೀರಭದ್ರಯ್ಯ ಅವರು ಗುತ್ತಿಗೆದಾರರಿಂದ ಕಮಿಷನ್ ಪಡೆಯುತ್ತಿರುವುದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಶಾಸಕರ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಮಧುಗಿರಿ ಕ್ಷೇತ್ರದ ಮತದಾರರಾದ ವೀರಣ್ಣ ಬಿನ್ ಈರಮರಿಯಣ್ಣ ಸಿದ್ದಾಪುರ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಸೋಮವಾರ ಲೋಕಾಯುಕ್ತ ಕಚೇರಿಗೆ ಮಧುಗಿರಿ ತಾಲೂಕಿನ ಹಲವು ಮತದಾರರೊಂದಿಗೆ ಲೋಕಾಯುಕ್ತ ಕಚೇರಿಗೆ ತೆರಳಿ ಮನವಿ ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಮನವಿ ಸಲ್ಲಿಸಿದ ಅವರು,ಕಾಮಗಾರಿಯೊಂದನ್ನು ಕ್ಷೇತ್ರದಲ್ಲಿ ನಡೆಸಿಕೊಂಡು ಹೋಗಲು ಅನುಕೂಲ ಮಾಡಿಕೊಡಲು ಐದು ಲಕ್ಷ ರೂಗಳ ಕಮಿಷನ್ ಬೇಡಿಕೆ ಇಟ್ಟಿದ್ದು,ಇದರಲ್ಲಿ ಒಂದು ಲಕ್ಷ ರೂಗಳನ್ನು ಸಂಬಂಧಿಸಿದ ವ್ಯಕ್ತಿಯಿಂದ ಪಡೆಯವ ಕುಟುಕು ಕಾರ್ಯಾಚರಣೆಯಲ್ಲಿ ಕ್ಷೇತ್ರದ ಶಾಸಕರು ಸಿಕ್ಕಿಬಿದ್ದಿರುವುದು ಸಾಮಾಜಿಕ ಜಾಲತಾಣ ಹಾಗೂ ಖಾಸಗಿ ವಾಹಿನಿಯಲ್ಲಿ ಹರಿದಾಡುತ್ತಿರುವ ದೃಶ್ಯಗಳೇ ಸಾಕ್ಷಿಯಾಗಿವೆ.

ಹಾಗಾಗಿ ಸದರಿ ಶಾಸಕರ ವಿರುದ್ದ ಸ್ವಯಂ ಪ್ರೇರಿತ ದೂರನ್ನು ಲೋಕಾಯುಕ್ತದವರು ದಾಖಲಿಸಿ, ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಮಧುಗಿರಿಯ ಇತಿಹಾಸದಲ್ಲಿಯೇ ಇಂತಹ ಘಟನೆ ನಡೆದಿಲ್ಲ.ಇದು ಕ್ಷೇತ್ರದ ಮತದಾರರಿಗೆ ಎಸಗಿದ ದ್ರೋಹವಾಗಿದೆ.ಕೂಡಲೇ ಶಾಸಕರಾದ ಎಂ.ವಿ.ವೀರಭದ್ರಯ್ಯ ಮಧುಗಿರಿ ಕ್ಷೇತ್ರದ ಮತದಾರರ ಕ್ಷಮೆ ಕೋರಬೇಕು ಎಂದು ವೀರಣ್ಣ ಒತ್ತಾಯಿಸಿದ್ದಾರೆ.

ಈ ವೇಳೆ ಕ್ಷೇತ್ರದ ಮತದಾರರಾದ ವೀರಣ್ಣ ಬಿನ್‌ಈರಮರಿಯಣ್ಣ, ರಾಮಾಂಜನಪ್ಪ,ರಾಜಗೋಪಾಲ್,ಜೆ.ಪಿ.ಮಂಜುನಾಥ್, ಹೇಮಂತ್,ಲೋಕೇಶ್,ಬಾಬಾ ಪಕೃದ್ದೀನ್,ಗಂಗಾಧರ್,ನವರತ್ನಕುಮಾರ್,ಶಿವಣ್ಣ ಐಡಿಹಳ್ಳಿ,ಪುರುಷೋತ್ತಮ್, ನಾರಾಯಣಗೌಡ, ಲಕ್ಷ್ಮಿನಾರಾಯಣ್, ಟಿ.ಪಿ.ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು