ತುಮಕೂರು (ಅ.19): ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಕೊಂಡ್ಲಿ ಸಮೀಪದ ಮಾವಿನಹಳ್ಳಿಯಲ್ಲಿ ಗಂಡನೇ ತನ್ನ ಹೆಂಡತಿ ಹಾಗೂ ಮಗುವನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಕವಿತಾ(24) ಹಾಗೂ ಜೀವನ್(4) ಬೆಳಗ್ಗೆ 6 ಗಂಟೆ ಸಂದರ್ಭದಲ್ಲಿ ಆರೋಪಿ ಸ್ವಾಮಿ ಹಾರೆಯಲ್ಲಿ ತಲೆ ಹೊಡೆದು ಹತ್ಯೆ ಮಾಡಿದ್ದಾನೆ.
ಗುಬ್ಬಿ ತಾಲೂಕು ನಿಟ್ಟೂರು ಹೋಬಳಿ ಚೇಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಪ್ರಕರಣ ನಡೆದಿದ್ದು, ಚೇಳೂರು ಪೊಲೀಸರು ಸ್ಥಳಕ್ಕೆ ದೌಡಯಿಸಿದ್ದಾರೆ. ಈ ವೇಳೆ ಕೊಲೆ ಮಾಡಿದ್ದ ಆರೋಪಿ ಸ್ವಾಮಿಯನ್ನು ಗ್ರಾಮಸ್ಥರು ಹಗ್ಗದಿಂದ ಕಟ್ಟಿ ಹಾಕಿ ಪೊಲೀಸರ ವಶಕ್ಕೆ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಚೇಳೂರು ಸಬ್ ಇನ್ಸೆಪೆಕ್ಟರ್, ಗುಬ್ಬಿ ಸರ್ಕಲ್ ಇನ್ಸ್ಪೆಕ್ಟರ್ ನದಾಫ್ ಭೇಟಿ ನೀಡಿದ್ದಾರೆ.