ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಎ.ಆರ್.ಕೊಪ್ಪ ಗೇಟ್ ಬಳಿ ಡಿ.26ರ ಸೋಮವಾರ ಬೆಳಗ್ಗೆ ಲಾರಿ ಅಪಘಾತಕ್ಕೀಡಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ತಾಲೂಕಿನ ವೈ.ಎನ್.ಹೊಸಕೋಟೆ ಹೋಬಳಿ ನಿವಾಸಿ ಗಂಗರಾಜು (29) ಎಂದು ಗುರುತಿಸಲಾಗಿದೆ. ಮೃತ ಗಂಗರಾಜು ಕೊರಟಗೆರೆಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ದ್ವಿಚಕ್ರ ವಾಹನದಲ್ಲಿ ಕೆಲಸ ನಿಮಿತ್ತ ಪಟ್ಟಣ ಕಡೆಯಿಂದ ಕೊರಟಗೆರೆ ಕಡೆಗೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಗಂಗರಾಜು ಮದುವೆಯಾಗಿ 25 ದಿನವಾಗಿತ್ತು. ಘಟನಾ ಸ್ಥಳಕ್ಕೆ ಪಾವಗಡ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.