News Karnataka Kannada
Thursday, May 02 2024
ತುಮಕೂರು

ತುಮಕೂರು: ಗಣಿಗಾರಿಕೆಯಿಂದ ನೊಂದವರಿಂದ ಮತ ಬಹಿಷ್ಕಾರದ ಎಚ್ಚರಿಕೆ

Tumakuru: Mining victims warn of boycott of votes
Photo Credit : News Kannada

ತುಮಕೂರು: ಬಲಾಡ್ಯರು ನೆಡೆಸುತ್ತಿರುವ ಕಲ್ಲು ಗಣಿಗಾರಿಕೆಯಿಂದ ತತ್ತರಿಸಿದ ಗ್ರಾಮಸ್ಥರಿಂದ ಮತ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ತುಮಕೂರು ತಾಲೂಕಿನ ಕೋರ ಹೋಬಳಿಯ (ಕೊರಟಗೆರೆ ವಿಧಾನಸಭಾ ಕ್ಷೇತ್ರ) ವ್ಯಾಪ್ತಿಯ ಅಹೋಬಲ ಅಗ್ರಹಾರ, ಚಿನಿವಾರನಹಳ್ಳಿ, ಜಕ್ಕೇನಹಳ್ಳಿ, ಪಾಳ್ಯದ ಸುತ್ತ ಮುತ್ತಲ ಪ್ರದೇಶದಲ್ಲಿ ಬಲಾಡ್ಯರು ನಡೆಸುವ ಗಣಿಗಾರಿಕೆಯಿಂದ ಸಾಕಷ್ಟು ಸಾವು,ನೋವುಗಳು ಸಂಭವಿಸಿವೆ.

ನಿತ್ಯ ಗಣಿಗಾರಿಕೆಯಿಂದ ಎದುರಾಗುತ್ತಿರುವ ಸಮಸ್ಯೆಗೆ ಬೇಸತ್ತು,‌ಗಣಿಗಾರಿಕೆಗೆ ಕಡಿವಾಣ ಹಾಕುವರೆಗೂ ಮತದಾನ ಮಾಡುವುದಿಲ್ಲ ಎಂದು ಗ್ರಾಮಸ್ಥರು ಬಿಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಹೋಬಲ ಅಗ್ರಹಾರ ಗ್ರಾಮದ ಸರ್ವೆ ನಂಬರ್ 172 ರಲ್ಲಿರುವ ಓಬಳದೇವರ ಗುಟ್ಟೆಯಲ್ಲಿ ಧನಲಕ್ಷ್ಮೀ ಕ್ರಷರ್ ಕಲ್ಲು ಗಣಿಗಾರಿಕೆ ನಡೆಸಲು ಜಿಲ್ಲಾಡಳಿತ ಅನುಮತಿ ನೀಡಿದೆ. ಇಲ್ಲಿ ಅವ್ಯಾಹತವಾಗಿ ನಡೆಯುತಿರುವ ಗಣಿಗಾರಿಕೆಯಿಂದ ಅನೇಕ ರೋಗ ರುಜನಗಳು ಎದುರಾಗಿವೆ.

ಹಲವಾರು ಮನೆಗಳ ಗೋಡೆ ಬಿರುಕು ಬಿಟ್ಟಿದೆ. ಸಾಕಷ್ಟು ಭಾರಿ ಗಣಿಗಾರಿಕೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಮೌನವಾಗಿದ್ದಾರೆ ಎಂದು ಆರೋಪಿಸಿದರು.

ಗ್ರಾಮಸ್ಥರು ಬ್ಯಾನರ್ ಅಳವಡಿಸುವ ಮೂಲಕ ಮತ ಬಹಿಷ್ಕಾರ ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಒಟ್ಟು 3330 ಮತದಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು