Categories: ತುಮಕೂರು

ತುಮಕೂರು: ಭಗೀರಥರು ಗಂಗೆಯನ್ನು ಭೂಮಿಗೆ ತಂದಂತಹ ಧೀಮಂತರು- ಕಸಾಪ ಅಧ್ಯಕ್ಷ

ತುಮಕೂರು: ಶ್ರೀ ಭಗೀರಥರು ಸತತ ಪ್ರಯತ್ನದಿಂದ ಗಂಗೆಯನ್ನು ಭೂಮಿಗೆ ತಂದಂತಹ ಧೀಮಂತರು. ನಾವು ಇಂದಿಗೂ ಯಾವುದೇ ಒಂದು ಕೆಲಸವನ್ನು ಅಸಾಧಾರಣ ಸಾಧನೆಗಳನ್ನು ಭಗೀರಥ ಪ್ರಯತ್ನ ವೆಂದೇ ಉದಾಹರಿಸುವುದು ವಾಡಿಕೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೆ.ಎಸ್. ಸಿದ್ದಲಿಂಗಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾ ಉಪ್ಪಾರ ಸಮಾಜದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿಂದು ಆಯೋಜಿಸಲಾಗಿದ್ದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯ ಉಪ್ಪಾರ ಸಮಾಜದ ಬಂಧುಗಳು ಸಮಾಜದ ಏಳಿಗೆಗಾಗಿ ಶಿಕ್ಷಣ ಸಂಸ್ಥೆಗಳನ್ನು ತೆರೆಯುವ ಮುಖೇನ, ಹಾಸ್ಟೆಲ್‌ಗಳನ್ನು ನಿರ್ಮಿಸುವ ಮುಖೇನ, ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಮಾಡುವುದರ ಮುಖೇನ ಎಲ್ಲಾ ಬಂಧುಗಳನ್ನು ಸುಶಿಕ್ಷಿತರನ್ನಾಗಿ ರೂಪಿಸಬೇಕು. ಇಂತಹ ಕೆಲಸಗಳು ಸಾಧನೆಗಳು ರೂಪುಗೊಂಡಲ್ಲಿ ಜಯಂತಿ ಆಚರಣೆಗಳು ಸಾರ್ಥಕವಾಗುತ್ತದೆಂದು ತಿಳಿಸಿದರು.

ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಸಿ.ಎಸ್. ಮಂಜುನಾಥ್ ಮಾತನಾಡುತ್ತಾ, ಭಗೀರಥರು ಇಕ್ಷ್ವಾಕು ವಂಶದಲ್ಲಿ ರಾಜಕುಮಾರನಾಗಿ ಜನಿಸಿದರು. ತನ್ನ ಪೂರ್ವಜರ ಭೀಕರ ಅಂತ್ಯವನ್ನು ತಿಳಿದು ಅವರಿಗೆ ಸದ್ಗತಿ ಪ್ರಾಪ್ತಿಯಾಗಲೆಂದು ತನ್ನ ಕಠಿಣ ಶ್ರಮದಿಂದ ಗಂಗೆಯನ್ನು ಭೂಮಿಗೆ ಕರೆತಂದರು. ಇಂತಹ ಧೀಮಂತರ ಸಾಧನೆಗಳನ್ನು ಸಮಾಜಕ್ಕೆ ಮುಂದಿನ ಪೀಳಿಗೆಗೆ ತಿಳಿಸಲು ಈ ಜಯಂತಿಯನ್ನು ಆಚರಿಸುತ್ತಿರುವುದು ಅತ್ಯಂತ ಶ್ಲಾಘನೀಯವೆಂದು ತಿಳಿಸಿದರು.

ಜಿಲ್ಲಾ ಉಪ್ಪಾರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಶ್ರೀನಿವಾಸ್ ಮಾತನಾಡುತ್ತಾ, ಸರ್ಕಾರವು ಭಗೀರಥರ ಸಾಧನೆಗಳನ್ನು ಸಮಾಜಕ್ಕೆ ಪುನರ್ ನೆನಪಿಸುವ ಉದ್ದೇಶದಿಂದ ಹಾಗೂ ಉಪ್ಪಾರ ಜನಾಂಗವು ಸಮಾಜದ ಮುಖ್ಯ ವಾಹಿನಿಗೆ ಬರುವಂತೆ ಮಾಡುವ ಸದುದ್ದೇಶದಿಂದ ಈ ಜಯಂತಿ ಕಾರ್ಯಕ್ರಮವನ್ನು ರೂಪಿಸಿರುತ್ತದೆ. ಸರ್ಕಾರದ ಆಶಯದಂತೆ ಜನಾಂಗದ ಎಲ್ಲಾ ಮಕ್ಕಳಿಗೆ ಶಿಕ್ಷಣವನ್ನು ನೀಡಿ   ಸತ್ ಪ್ರಜೆಗಳಾಗಿ ರೂಪಿಸಬೇಕೆಂದು ಕರೆನೀಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ. ರವಿಕುಮಾರ್ ಅವರು ಜಯಂತಿಯ ಶುಭಾಶಯಗಳನ್ನು ತಿಳಿಸುತ್ತಾ, ಸರ್ಕಾರದ ನಿರ್ದೇಶನದಂತೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ   ಮನವರಿಕೆ ಮಾಡಿಕೊಟ್ಟರು. ಮೇಲ್ವಿಚಾರಕರಾದ ಡಿ.ವಿ. ಸುರೇಶ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲರಿಗೆ ಭಾರತೀಯ ಚುನಾವಣಾ ಆಯೋಗದ ಪ್ರತಿಜ್ಞಾವಿಧಿಯನ್ನು ಭೋಧಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಶುವೈದ್ಯಕೀಯ ಇಲಾಖೆಯ ವೈದ್ಯಾಧಿಕಾರಿ ಡಾ. ನಾಗೇಶ್, ಉಪ್ಪಾರ ಜನಾಂಗದ ಮುಖಂಡರುಗಳಾದ ಆರ್. ರೇಣುಕಯ್ಯ, ಹೆಚ್. ಆರ್. ಸತೀಶ್, ಗಂಗಪ್ಪ, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ವಕೀಲ ಎನ್. ಅನಿಲ್ ಕುಮಾರ್, ಹೆಚ್.ಕೆ. ಶಿವಣ್ಣ, ರಂಗನಾಥ್, ಲೋಕೇಶ್, ಧರ್ಮರಾಜು, ಲಿಂಗಣ್ಣ ಮತ್ತು ಮೂಡಲಗಿರಿ ಅವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿಬ್ಬಂದಿಗಳಾದ ಬಿ.ಆರ್. ರಾಜೇಗೌಡ, ಎನ್. ರಮೇಶ್, ಬಿ.ಕೆ. ರಾಜೇಶ್, ಆರ್. ಎನ್. ಮೇಘನಾ ಮತ್ತು ಎಸ್. ಎನ್. ದರ್ಶನ್ ಮೊದಲಾದವರು ಹಾಜರಿದ್ದರು.

Gayathri SG

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

6 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

6 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

7 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

7 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

8 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

9 hours ago