ತುಮಕೂರು: ರಾಜ್ಯದ ಮಾಜಿ ಸಚಿವ ದಿವಂಗತ ತಾಳೆಕೆರೆ ಸುಬ್ರಹ್ಮಣ್ಯಂ ಅವರ ಜನ್ಮಸ್ಥಳ ಹಾಗೂ ಹೇಮಾವತಿ ನೀರಿನ ಮೂಲವಾದ ತಾಳೆಕೆರೆ ಗ್ರಾಮದ ಅಭಿವೃದ್ಧಿಯನ್ನು ಸುಮಾರು 3 ಕೋಟಿ ರೂ.ಗಳ ವೆಚ್ಚದಲ್ಲಿ ಮಾಡಲಾಗಿದೆ.
ತಾಲೂಕಿನ ತಾಳೆಕೆರೆ ಗ್ರಾಮದಲ್ಲಿ 85 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸಿಸಿ ರಸ್ತೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಶಾಸಕ ಮಸಾಲೆ ಜಯರಾಮ್, ಹಲವು ವರ್ಷಗಳಿಂದ ಗ್ರಾಮವನ್ನು ನಿರ್ಲಕ್ಷಿಸಲಾಗಿದೆ. ಇಲ್ಲಿಯವರೆಗೆ ಆಡಳಿತ ನಡೆಸಿದ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಅವರು ದೂರಿದರು.
ತಾಳೆಕೆರೆ ಗ್ರಾಮದಲ್ಲಿ, ಹಲವಾರು ವರ್ಷಗಳಿಂದ ಬಾಕಿ ಉಳಿದಿರುವ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಗ್ರಾಮಸ್ಥರು ಸಹಕರಿಸಿ ಕಾಮಗಾರಿಗಳಿಗೆ ಅವಕಾಶ ನೀಡಿದರೆ ಕೆಲಸ ಉತ್ತಮವಾಗಿ ಸಾಗುತ್ತದೆ.
ಈಗ ಮೊದಲ ಹಂತದ ಕಾಮಗಾರಿ ನಡೆಯುತ್ತಿದೆ. ಇದರ ನಂತರ, ಹೆಚ್ಚುವರಿ ಕೆಲಸವನ್ನು ಮತ್ತೆ ಪ್ರಾರಂಭಿಸಲಾಗುವುದು. ಶಾಸಕ ಮಸಾಲೆ ಜಯರಾಮ್ ಅವರು ಉತ್ತಮ ರೀತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು.