Categories: ತುಮಕೂರು

ತುಮಕೂರು: ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು

ತುಮಕೂರು: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಗೊಳ್ಳಬೇಕಾದರೆ ಮತದಾರರಾದ ನಾವು ತಪ್ಪದೇ ನಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು, ಇದು ನಮ್ಮೆಲ್ಲರ ಆದ್ಯ ಕರ್ತವ್ಯವೂ ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ಅವರು ಮತದಾರರಿಗೆ ಮನವಿ ಮಾಡಿದರು.

ನಮ್ಮ ನಡೆ ಮತಗಟ್ಟೆಯ ಕಡೆ ಕಾರ್ಯಕ್ರಮದ ಅಂಗವಾಗಿ ನಗರದ ಕಾವೇರಿ ಶಾಲೆ, ಆಳಶೆಟ್ಟಿಕೆರೆಪಾಳ್ಯದ ಮತಗಟ್ಟೆ ಸಂಖ್ಯೆ 138 ರಿಂದ 144 ಇಲ್ಲಿ ಧ್ವಜಾರೋಹಣ ನೇರವೇರಿಸಿ ಅವರು ಮಾತನಾಡಿದರು.

ತುಮಕೂರು ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯಾದ್ಯಂತ ಶೇಕಡಾ ನೂರಕ್ಕೆ ನೂರರಷ್ಟು ಮತದಾನ ಗುರಿ ಹೊಂದುವ ಮೂಲಕ ಸರ್ವಕಾಲಿಕ ದಾಖಲೆ ಮಾಡುವ ಉದ್ದೇಶದಿಂದ ಇಂತಹ ಜನ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಮೇ ೧೦ರಂದು ಜಿಲ್ಲೆಯ ಎಲ್ಲಾ ಮತಬಾಂಧವರು ಮತ ಕೇಂದ್ರಗಳಿಗೆ ಬಂದು ಮತ ಚಲಾಯಿಸಿದಾಗ ನಮ್ಮ ಸ್ವೀಪ್ ಚಟುವಟಿಕೆಗಳ ಸದುದ್ದೇಶ ಸಫಲವಾಗುತ್ತದೆ ಎಂದರಲ್ಲದೆ, ಒಟ್ಟಾರೆ ಮೇ 10ರಂದು ಮತದಾನದ ಬಗ್ಗೆ ಜನಸಾಮಾನ್ಯರಲ್ಲಿ ಅರಿವಿ ಮೂಡಿಸುವುದೇ ಈ ಎಲ್ಲಾ ಚಟುವಟಿಕೆಗಳ ಸದುದ್ದೇಶವಾಗಿರುತ್ತದೆ.

ಜಿಲ್ಲೆಯ ೨೬೮೩ ಬಿಎಲ್‌ಓ ಗಳು ಸಕ್ರಿಯವಾಗಿ ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಈ ಬಾರಿ ದಾಖಲೆ ಪ್ರಮಾಣಲ್ಲಿ ಮನೆ ಮನೆ ಭೇಟಿ ಮಾಡಿರುತ್ತಾರೆ. ಜಿಲ್ಲಾ ಚುನಾವಣಾಧಿಕಾರಿಯಾಗಿ ಹಾಗೂ ಸ್ವೀಪ್ ಸಮಿತಿ ಪರವಾಗಿ ಇವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದರು.

ಮತದಾನದ ಕೇಂದ್ರಗಳ ಬಗ್ಗೆ ಅರಿವಿಲ್ಲದೆ ಮತದಾನಕ್ಕೆ ಬಾರದೇ ಇರುವ ಸಂಭವ ಹಿನ್ನೆಲೆಯಲ್ಲಿ ಮೇ 1ರಿಂದ ಮತದಾರರಿಗೆ ವೋಟರ್ ಸ್ಲಿಪ್ ವಿತರಿಸುವ ಕಾರ್ಯಕ್ರಮವಿದ್ದು ಎಲ್ಲಾ ಮತದಾರರಿಗೆ ವೋಟರ್ ಸ್ಲಿಪ್ ತಲುಪಿದಲ್ಲಿ ಅವರು ಖಚಿತವಾಗಿ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸುತ್ತಾರೆ. ಗ್ರಾಮ ಮಟ್ಟದಲ್ಲಿ ಕೆಲಸ ಮಾಡುವ ಬಿಎಲ್‌ಓ ಗಳಿಗೆ ಮತದಾರರ ಬಗ್ಗೆ ಸಂಪೂರ್ಣ ಅರಿವಿದ್ದು ಅವರು ಈ ಬಾರಿ ಮತದಾರರಿಗೆ ವೋಟರ್ ಸ್ಲಿಪ್ ವಿತರಿಸಲಿದ್ದಾರೆ ಎಂದರು. ಈ ಬಾರಿ ನಗರ ಪ್ರದೇಶಗಳಲ್ಲೂ ಬಿಎಲ್‌ಓಗಳು ಮನೆ-ಮನೆ ತಲುಪುವ ಪ್ರಯತ್ನ ಮಾಡಿದ್ದಾರೆ ಎಂದರು.

ದಿವ್ಯಾಂಗ ಹಾಗೂ ೮೦+ ಮತದಾರರ ಮನೆಗೆ ತೆರಳಿ ಮತದಾನದ ವ್ಯವಸ್ಥೆ ಮಾಡಲಾಗಿದೆ. ಆದರೆ ಸುಶಿಕ್ಷಿತರಾದ ನಾವು ಮೇ೧೦ರಂದು ಮನೆಯಲ್ಲಿ ಕೂರದೆ ಮತಕೇಂದ್ರಕ್ಕೆ ತೆರಳಿ ಮತದಾನ ಮಾಡಬೇಕು ಎಂದು ತಿಳಿಸಿದರು.

ಪ್ರಜಾಪ್ರಭುತ್ವ ಹಬ್ಬದ ಅಂಗವಾಗಿ ಮತಗಟ್ಟೆಗಳ ಆವರಣದಲ್ಲಿ ಧ್ವಜಾರೋಹಣ ನೇರವೇರಿಸುವುದು ಮತದಾರರನ್ನು ಎಚ್ಚರಿಸಲು ಹಾಗೂ ಮತದಾರರಿಗೆ ಮತಗಟ್ಟೆಗಳ ಬಳಕೆ ಮಾಹಿತಿ ನೀಡುವುದೇ ಆಗಿದೆ ಎಂದ ಅವರು, ವಿದ್ಯಾವಂತರು ಹೆಚ್ಚು ಇರುವ ಕಡೆ ಮತದಾನದ ಪ್ರಮಾಣ ಹೆಚ್ಚಿರಬೇಕು ಆದರೆ ವಿಪರ್ಯಾಸ ಎಂದರೆ ಇಲ್ಲಿಯೇ ಮತದಾನ ಪ್ರಮಾಣ ಕಡಿಮೆಯಾಗುತ್ತಿದೆ ಎಂದರು.

ನಗರ ಪ್ರದೇಶಗಳಲ್ಲಿ ಸಾಕ್ಷರತಾ ಪ್ರಮಾಣ ಶೇಕಡಾ ೯೫ಕ್ಕೂ ಹೆಚ್ಚಿರುತ್ತದೆ ಆದರೆ ಮತದಾನದ ಪ್ರಮಾಣ ಶೇ 65 ರಿಂದ 68ರ ನಡುವೆಯೇ ಇದೆ. ಇಂದು ಧ್ವಜಾರೋಹಣ ನೇರವೇರಿಸಿದಂತಹ ನಗರದ ಆಳಶೆಟ್ಟಿಕೆರೆಪಾಳ್ಯದ ಕಾವೇರಿ ಶಾಲೆಯ ೭ಮತಗಟ್ಟೆಗಳಲ್ಲಿ ಮತದಾನದ ಪ್ರಮಾಣ ಶೇಕಡಾ ೪೫ರಷ್ಟಿದ್ದು, ಇಲ್ಲಿ ಈ ಬಾರಿ ದಾಖಲಾರ್ಹ ರೀತಿಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಬೇಕೆಂದು ಮತದಾರರಿಗೆ ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಅಧ್ಯಕ್ಷೆ ಡಾ. ಕೆ. ವಿದ್ಯಾಕುಮಾರಿ ಅವರು ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಹಾಗೂ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಹೆಚ್.ವಿ.ದರ್ಶನ್ ಉಪಸ್ಥಿತರಿದ್ದರು. ತದ ನಂತರ ಈ ಮತಗಟ್ಟೆಯಿಂದ ಶಾಂತಿನಗರದ ಉದ್ಯಾನವನದವರೆಗೆ ವಾಕಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ashika S

Recent Posts

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

12 mins ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

18 mins ago

ಮೊದಲ ಬಾರಿಗೆ ಮರಾಠಿ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

ಕನ್ನಡದ ಹೆಮ್ಮೆಯ ಕಲೆ ಯಕ್ಷಗಾನ ಇದೀಗ ಗಡಿಗಳನ್ನು ದಾಟಿ ಮಹಾರಾಷ್ಟ್ರದ ಕಡೆಗೆ ಪಯಣ ಬೆಳೆಸಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ…

31 mins ago

ತೃತೀಯ ಲಿಂಗಿಯ ಹತ್ಯೆ ಪ್ರಕರಣ: ಮಹಿಳೆಯ ಬಂಧನ

ತೃತೀಯ ಲಿಂಗಿಯನ್ನು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.

49 mins ago

ಬಿಗ್‌ಬಾಸ್‌ 16 ಸ್ಪರ್ಧಿ ʼಅಬ್ದು ರೋಝಿಕ್‌ʼಗೆ ಮದುವೆಯಂತೆ

ಬಿಗ್‌ಬಾಸ್‌ 16ನಲ್ಲಿ ಸ್ಪರ್ಧಿಸಿದ್ದ ಅಬ್ದು ರೋಝಿಕ್‌ ವಿಡಿಯೋವೊಂದನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಾನೀಗ ಪ್ರೀತಿಗೆ ಬಿದ್ದಿದ್ದು, ಜುಲೈ 7ರಂದು ಮನಮೆಚ್ಚಿದ…

60 mins ago

ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

ಹಾಸನದ ಸಿ.ಡಿ.ಹಗರಣವನ್ನು ಸಿ.ಬಿ.ಐ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

1 hour ago