ತುಮಕೂರು: ತುಮಕೂರು ನಗರದ ಮಂಡಿಪೇಟೆ ಕಡೆಯಿಂದ ಬರುತ್ತಿದ್ದ ಮಾರುತಿ ವ್ಯಾನ್, ಚಾಲಕನ ನಿಯಂತ್ರಣತಪ್ಪಿ, ಹೊರಪೇಟೆಯಲ್ಲಿರುವ ಬೆಸ್ಕಾಂ ಸೆಕ್ಯೂರಿಟಿ ಕಾಂಪೌಂಡ್ಗೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಈ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತುಮಕೂರಿನ ದೀಪು(36) ಮತ್ತು ಚಾಲಕ ಖಾಸಿಂ(25) ಮೃತ ದುರ್ದೈವಿಗಳು.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರೂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಕಾರಿನಲ್ಲಿದ್ದ ಮತ್ತೊಬ್ಬ 22 ವರ್ಷದ ಮಂಜುನಾಥ್ ಗಂಭೀರ ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.