ತುಮಕೂರು: ಬೆಸ್ಕಾಂ ನಗರ ಉಪವಿಭಾಗ-2 ರ ಜಯನಗರ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಕೃಷಿ ನೀರಾವರಿ ಪಂಪ್ ಸೆಟ್ ಗಳನ್ನು ಉಪಯೋಗಿಸುತ್ತಿರುವ ಸ್ಥಾವರಗಳಿಗೆ ಸಂಬಂಧಿಸಿದಂತೆ ಅಕ್ರಮ-ಸಕ್ರಮ ಯೋಜನೆಯಡಿ 2014-15 ರಿಂದ 2022-23 ರವರೆಗೆ ಸಕ್ರಮೀಕರಣ ಶುಲ್ಕ 1೦,೦೦೦ ರೂ. ಮತ್ತು ಇತರೆ ಠೇವಣಿ ಮೊತ್ತಗಳನ್ನು ಪಾವತಿಸಿರುವ ಗ್ರಾಹಕರುಗಳ ಜೇಷ್ಠತಾ ಪಟ್ಟಿಯನ್ನು ನಗರ ಉಪವಿಭಾಗ-2 ರ ಕಛೇರಿ ಹಾಗೂ ಶಾಖಾ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಈವರೆಗೂ ಮೂಲ ಭೂತ ಸೌಕರ್ಯ ಕಲ್ಪಿಸದೇ ಇರುವ, ವೋಲ್ಟೇಜ್ ಸಮಸ್ಯೆಯಿರುವಂತಹ ಹಾಗೂ ಸರ್ವೀಸ್ ಮೇನ್ಸ್ ೩೦ ಮೀಟರ್ಗಿಂತ ದೂರದಿಂದ ಎಳೆದು ಪಂಪ್ಸೆಟ್ ಚಾಲನೆಯಲ್ಲಿರುವ ಗ್ರಾಹಕರು ಉಪವಿಭಾಗ-2 ಕಚೇರಿ ಅಥವಾ ಶಾಖಾ ಕಚೇರಿಗೆ ಭೇಟಿ ನೀಡಿ ಸೂಚನಾ ಫಲಕಗಳಲ್ಲಿ ಪ್ರಕಟಿಸಿರುವ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.
ಒಂದು ವೇಳೆ ಸಕ್ರಮೀಕರಣ ಶುಲ್ಕ 1೦,೦೦೦ ರೂ. ಮತ್ತು ಇತರೆ ಠೇವಣಿ ಮೊತ್ತಗಳನ್ನು ಪಾವತಿಸಿ ಜೇಷ್ಠತಾ ಪಟ್ಟಿಯಲ್ಲಿ ಹೆಸರು ಹಾಗೂ ಆರ್.ಆರ್.ಸಂಖ್ಯೆ ಬಿಟ್ಟು ಹೋಗಿದ್ದಲ್ಲಿ ಅಂತಹ ಗ್ರಾಹಕರು ಏಪ್ರಿಲ್ 13 ರೊಳಗಾಗಿ ಹಣ ಕಟ್ಟಿರುವ ರಸೀದಿ ಮತ್ತು ಇತರೇ ಅಗತ್ಯ ಮೂಲದಾಖಲಾತಿಗಳೊಂದಿಗೆ ಉಪವಿಭಾಗ-2 ರ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲವಾದಲ್ಲಿ ಮುಂದಿನ ಆಗು-ಹೋಗುಗಳಿಗೆ ಬೆಸ್ಕಾಂ ಜವಾಬ್ದಾರಿಯಲ್ಲ ಎಂದು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.