ತುಮಕೂರು: ಜಗತ್ತಿನಲ್ಲಿಯೇ ಪ್ರಥಮ ಸಂಸತ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅನುಭವ ಮಂಟಪದಲ್ಲಿ ಎಲ್ಲ ಧರ್ಮ, ಜಾತಿಯವರಿಗೆ ಜಾಗ ಕೊಟ್ಟವರು ಬಸವೇಶ್ವರರು, ಸಮಾಜವನ್ನು ಅಜ್ಞಾನದಿಂದ ಹೊರತರುವುದು ಅವರ ಕನಸಾಗಿತ್ತು, ಅಂಥದ್ದೊಂದು ನಿರ್ಮಾಣಕ್ಕೆ ನಾವೆಲ್ಲರೂ ಕಟಿಬದ್ಧರಾಗಬೇಕಿದೆ. ಕನಸು ನನಸಾಗಿದೆ ವೀರಶೈವ ಮತ್ತು ಲಿಂಗಾಯತ ಶರಣ ಸಮಾಜ ಎಂಬ ನಾಣ್ಯದ ಎರಡು ಮುಖಗಳು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಈಶ್ವರ ಖಂಡ್ರೆ ಹೇಳಿದರು.
ಅಖಿಲ ಭಾರತ ವೀರಶೈವ, ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ಇಲ್ಲಿನ ಶ್ರೀ ಕ್ಷೇತ್ರ ಸಿದ್ದಗಂಗಾ ಮಠದ ಆವರಣದಲ್ಲಿ ಆಯೋಜಿಸಿದ್ದ ಬೆಂಗಳೂರು ವಿಭಾಗ ಮಟ್ಟದ ಮಹಿಳಾ ಮತ್ತು ಯುವ ಕಾರ್ಯಕರ್ತರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಇಲ್ಲಿ ನಡೆಯುತ್ತಿರುವುದು ವಿಷಾದನೀಯ. ಲಿಂಗಾಯತರು ಮತ್ತು ವೀರಶೈವರು ಬೇರೆ ಬೇರೆ ಎಂಬ ವಾದ ಬೆಳೆದಿದೆ ವೀರಶೈವ ಮತ್ತು ಲಿಂಗಾಯತ ಶರಣ ಸಮಾಜ ಎಂಬ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಪುನರುಚ್ಚರಿಸಿದರು.
“ನಮ್ಮಿಬ್ಬರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಅಂಗೈಯಲ್ಲಿ ಲಿಂಗವನ್ನು ಇಟ್ಟುಕೊಂಡು ಪೂಜಿಸುವ ನಾವೆಲ್ಲರೂ ವೀರಶೈವ ಲಿಂಗಾಯತರು. ಇದು ಈ ಎರಡು ದಿನಗಳ ಕಾರ್ಯಾಗಾರ ಮತ್ತು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ” ಎಂದು ಅವರು ಹೇಳಿದರು.