ತುಮಕೂರು: ‘ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕಹಿ ಘಟನೆ ನಡೆದೇ ಇಲ್ಲ. ಹಿರಿಯ ಅಧಿಕಾರಿಗಳಿಗೆ ರಾತ್ರೋರಾತ್ರಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲು ಆದೇಶಿಸಲಾಗುತ್ತದೆಯೇ? ತುಮಕೂರು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಇಲಾಖೆಯ ಅಧಿಕಾರಿಗಳ ವೈಫಲ್ಯ ಮತ್ತು ಕೊರಟಗೆರೆಯಲ್ಲಿ ಬಿಜೆಪಿಯ ರಾಜಕೀಯ ಕುತಂತ್ರಗಳ ಬಗ್ಗೆ ರಾಜ್ಯ ಸರ್ಕಾರ ಮತ್ತು ಇಂಧನ ಸಚಿವರ ಗಮನಕ್ಕೆ ತರುತ್ತೇನೆ ಎಂದು ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಹೇಳಿದರು.
ಕೊರಟಗೆರೆ ತಾಲೂಕಿನ ಐ.ಕೆ.ಕಾಲೋನಿಯಲ್ಲಿ (ಸಂಕೇನಹಳ್ಳಿ) ನ.16ರ ಬುಧವಾರ ಕೆಪಿಟಿಸಿಎಲ್ ವತಿಯಿಂದ 11.68 ಕೋಟಿ ರೂ.ಗಳ ವೆಚ್ಚದ ಎರಡು ಕಡೆ ವಿದ್ಯುತ್ ಉಪಕೇಂದ್ರ ಘಟಕಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ತುಂಬಾಡಿ ಗ್ರಾಮದಲ್ಲಿ 10.19 ಕೋಟಿ ರೂ.ಗಳು ಸೇರಿದಂತೆ ಒಟ್ಟು 21.85 ಕೋಟಿ ರೂ.ಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
”ತುಮಕೂರು ಕೆಪಿಟಿಸಿಎಲ್ ಇಲಾಖೆ 21 ಕೋಟಿ ರೂ.ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ಹೊಣೆ ಹೊತ್ತಿದ್ದು, ರಾತ್ರೋರಾತ್ರಿ ಶಂಕುಸ್ಥಾಪನೆ ಮುಂದೂಡಲು ಕಾರಣವೇನು. ಕೆಪಿಟಿಸಿಎಲ್ ಕಾರ್ಯಪಾಲಕ ಎಂಜಿನಿಯರ್ (ಇಇ) ಕಾರ್ಯಕ್ರಮಕ್ಕೆ ಗೈರು ಹಾಜರಾಗಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಶಂಕುಸ್ಥಾಪನೆಯ ನಾಮಫಲಕ ಇಲ್ಲದೇ ಭೂಮಿ ಒಡೆಯುವ (ಗುದ್ದಲಿ ಪೂಜೆ) ಕಾರ್ಯ ನಡೆದಿದ್ದು, ಕಾರ್ಯಕ್ರಮದ ಬಗ್ಗೆ ಸ್ಥಳೀಯ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರಿಗೆ ಮಾಹಿತಿ ನೀಡಿಲ್ಲ ಎಂದು ಆರೋಪಿಸಿದರು.
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…