ತುಮಕೂರು: ಕೆಎಸ್ಆರ್ ಟಿಸಿ ಬಸ್ ಹಾಗೂ ಆಟೋ ನಡುವೆ ರಸ್ತೆ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋದಲ್ಲಿದ್ದ ಓರ್ವ ಮಹಿಳೆ ಹಾಗೂ 9 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೊಡಿಗೇನಹಳ್ಳಿ ಸಮೀಪವಿರುವ ಜಯಮಂಗಲಿ ಬ್ರಿಡ್ಜ್ ಬಳಿ ದುರ್ಘಟನೆ ಸಂಭವಿಸಿದೆ. ಆಟೋ ಮಹಿಳೆಯರು ಕರೆದುಕೊಂಡು ಗೌರಿಬಿದನೂರು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ತೆರಳುತ್ತಿತ್ತು. ಈ ವೇಳೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಜೋಗೇನೇಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಮೃತಪಟ್ಟ ಮಹಿಳೆ. ಉಳಿದ 9 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.