ತುಮಕೂರು: ಪ್ರತಿವರ್ಷದಂತೆ ಈ ಬಾರಿಯೂ ಜೂನ್ ೩, ೨೦೨೩ರಂದು “ವಿಶ್ವ ಬೈಸಿಕಲ್ ದಿನಾಚರಣೆಯ ಪ್ರಯುಕ್ತ ಆರೋಗ್ಯಕ್ಕಾಗಿ ಸೈಕಲ್ ಎಂಬ ಘೋಷ ವಾಕ್ಯದೊಂದಿಗೆ ಸೈಕಲ್ ಜಾಥಾ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಆಯೋಜಿಸಿದೆ.
ಅಂದು ಬೆಳಿಗ್ಗೆ ೮ ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಮಂಜುನಾಥ್ ತಿಳಿಸಿದ್ದಾರೆ.
ಆರೋಗ್ಯಕ್ಕಾಗಿ ಸೈಕಲ್ ಎಂಬ ಘೋಷವಾಕ್ಯದೊಂದಿಗೆ ಎನ್.ಸಿ.ಡಿ.(ಅಸಾಂಕ್ರಾಮಿಕ) ಖಾಯಿಲೆಗಳಿಗೆ ಪ್ರಮುಖ ಅಪಾಯಕಾರಿ ವರ್ತನೆಗಳಾದ ತಂಬಾಕು ಸೇವನೆ, ಮದ್ಯ ಸೇವನೆ, ಕಳಪೆ ಆಹಾರ ಪದ್ಧತಿ, ಸಾಕಷ್ಟು ದೈಹಿಕ ಚಟುವಟಿಕೆ ಮತ್ತು ವಾಯು ಮಾಲಿನ್ಯ ಕುರಿತು ಜಾಗೃತಿ ಮೂಡಿಸಲು ಸೈಕಲ್ ಜಾಥಾವನ್ನು ಜಿಲ್ಲಾ ಮಟ್ಟದಲ್ಲಿ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.